9:01 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಶೌರ್ಯ ರಥ ಯಾತ್ರೆ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ; ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ ಪರ್ಯಾಯ ಮಾರ್ಗಗಳು ಯಾವುದು ?

09/10/2023, 12:33

ಮಂಗಳೂರು(Reporterkarnataka.com: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಶೌರ್ಯ ಯಾತ್ರಾ ಮೆರವಣಿಗೆ ಮಧ್ಯಾಹ್ನ ಅ.9ರಂದು ಮಧ್ಯಾಹ್ನ 2.00 ಗಂಟೆಗೆ ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ನಗರದ ಕದ್ರಿ ಮೈದಾನದ ವರೆಗೆ ನಡೆಯಲಿದ್ದು, ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಪಿ ವಿ ಎಸ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಕದ್ರಿ ಕಂಬಳ ಜಂಕ್ಷನ್ ಕಡೆಯಿಂದ ಬಂಟ್ಸ್ ಹಾಸ್ಟೇಲ್‌ ಕಡೆಗೆ, ಮಲ್ಲಿಕಟ್ಟೆ ಕಡೆಯಿಂದ ಬಂಟ್ಸ್ ಹಾಸ್ಟೆಲ್‌ ಕಡೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕಾರ್ಯಕ್ರಮ ಮುಗಿಯುವ ವರೆಗೆ ನಿಷೇಧಿಸಲಾಗಿದೆ.

ಬದಲಿ ಸಂಚಾರ ವ್ಯವಸ್ಥೆ ಈ ಕೆಳಗಿನಂತಿದೆ :
1. ಪಡೀಲ್ ಮತ್ತು ತಲಪಾಡಿಕಡೆಯಿಂದ ಬರುವ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಪಂಪ್ ವೆಲ್ ಗೆ ಬಂದು ಪಂಪ್ ವೆಲ್ ನಿಂದ ನಂತೂರು, ಕೆ ಪಿ ಟಿ ಮಾರ್ಗ ಮುಖಾಂತರ ಕೆ ಎಸ್ ಆರ್ ಟಿ ಸಿ ಗೆ ಅಂತೆಯೇ ಕೆ ಎಸ್ ಆರ್ ಟಿ ಸಿ ಯಿಂದ ಹೊರ ಹೋಗುವ ಎಲ್ಲಾ ಬಸ್ಸುಗಳು ಕೆ ಪಿ ಟಿ, ನಂತೂರು, ಪಂಪ್ ವೆಲ್ ಮುಖಾಂತರ ಮುಂದುವರಿಯುವುದು.

2. ನಂತೂರು ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಬರುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಶಿವಭಾಗ್, ಹಾರ್ಟಿಕಲ್ಚರ್, ಬೆಂದೂರು, ಕರಾವಳಿ, ಕಂಕನಾಡಿ ಜಂಕ್ಷನ್ ತಲುಪಿ ಫಳ್ನೀರ್ ರಸ್ತೆ ಮುಖಾಂತರ ಸ್ಟೇಟ್ ಬ್ಯಾಂಕ್ ಕಡೆ ಮುಂದುವರಿಯುವುದು.

3. ಪಂಪ್ ವೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್‌ ಕಡೆಗೆ ಹೋಗುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಕಂಕನಾಡಿ ಜಂಕ್ಷನಿಗೆ ಬಂದು ಸ್ಟೇಟ್ ಬ್ಯಾಂಕ್‌ ಕಡೆಗೆ ಮುಂದುವರಿಯುವುದು.

4. ಕಾವೂರು, ಬೋಂದೇಲ್‌ ಕಡೆಯಿಂದ ಬರುವ ಬಸ್ಸುಗಳು ಹಾಗೂ ಇತರ ವಾಹನಗಳು ಕೆ ಎಸ್ ಆರ್ ಟಿ ಸಿ, ಲಾಲ್ ಭಾಗ್, ಪಿ ವಿ ಎಸ್. ಕೆ ಎಸ್ ಆರ್ ರಸ್ತೆ ಮುಖಾಂತರ ಹಂಪನಾ ಕಟ್ಟೆ ಗೆ ಬಂದು ಸ್ಟೇಟ್ ಬ್ಯಾಂಕ್ ಕಡೆಗೆ ಮುಂದುವರಿಯುವುದು.

5. ಸ್ಟೇಟ್ ಬ್ಯಾಂಕ್ ಕಡೆಯಿಂದ ಉಡುಪಿ, ಮೂಡಬಿದ್ರೆ ಕಡೆಗೆ ಹೋಗುವ ಎಲ್ಲಾ ಬಸ್ಸು ಹಾಗೂ ಇತರ ವಾಹನಗಳು ಕೆ ಎಸ್ ಆರ್ ರಸ್ತೆ ಮುಖಾಂತರ ಪಿ ವಿ ಎಸ್. ಲಾಲ್ ಭಾಗ್ ಜಂಕ್ಷನ್ ನಿಂದ ಮುಂದಕ್ಕೆ ಉಡುಪಿ ಕಡೆಗೆ ಸಂಚರಿಸುವುದು. ಕೆ ಎಸ್ ಆರ್ ಟಿ ಸಿ, ಕೆ ಪಿ ಟಿ ಮುಖಾಂತರ ಮೂಡುಬಿದ್ರೆ ಕಡೆಗೆ ಸಂಚರಿಸುವುದು. ಅಂತೆಯೇ ಮತ್ತೂರು, ತಲಪಾಡಿ, ಕಡೆಗೆ ಸಂಚಾರಿಸುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು, ಹಂಪನಕಟ್ಟೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ಫಳ್ನೀರು ರಸ್ತೆ ಮುಖಾಂತರ ಕಂಕನಾಡಿ, ಕರಾವಳಿ ಜಂಕ್ಷನ್ ಮುಖೇನಾ ಮುಂದುವರಿಯಬೇಕಾಗಿ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು