12:27 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಶೌರ್ಯ ರಥ ಯಾತ್ರೆ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ ; ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದ ಪರ್ಯಾಯ ಮಾರ್ಗಗಳು ಯಾವುದು ?

09/10/2023, 12:33

ಮಂಗಳೂರು(Reporterkarnataka.com: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳದ ವತಿಯಿಂದ ಶೌರ್ಯ ಯಾತ್ರಾ ಮೆರವಣಿಗೆ ಮಧ್ಯಾಹ್ನ ಅ.9ರಂದು ಮಧ್ಯಾಹ್ನ 2.00 ಗಂಟೆಗೆ ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ನಗರದ ಕದ್ರಿ ಮೈದಾನದ ವರೆಗೆ ನಡೆಯಲಿದ್ದು, ಅಂಬೇಡ್ಕರ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಪಿ ವಿ ಎಸ್ ವೃತ್ತದಿಂದ ಬಂಟ್ಸ್ ಹಾಸ್ಟೇಲ್ ಕಡೆಗೆ, ಕದ್ರಿ ಕಂಬಳ ಜಂಕ್ಷನ್ ಕಡೆಯಿಂದ ಬಂಟ್ಸ್ ಹಾಸ್ಟೇಲ್‌ ಕಡೆಗೆ, ಮಲ್ಲಿಕಟ್ಟೆ ಕಡೆಯಿಂದ ಬಂಟ್ಸ್ ಹಾಸ್ಟೆಲ್‌ ಕಡೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕಾರ್ಯಕ್ರಮ ಮುಗಿಯುವ ವರೆಗೆ ನಿಷೇಧಿಸಲಾಗಿದೆ.

ಬದಲಿ ಸಂಚಾರ ವ್ಯವಸ್ಥೆ ಈ ಕೆಳಗಿನಂತಿದೆ :
1. ಪಡೀಲ್ ಮತ್ತು ತಲಪಾಡಿಕಡೆಯಿಂದ ಬರುವ ಎಲ್ಲಾ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಪಂಪ್ ವೆಲ್ ಗೆ ಬಂದು ಪಂಪ್ ವೆಲ್ ನಿಂದ ನಂತೂರು, ಕೆ ಪಿ ಟಿ ಮಾರ್ಗ ಮುಖಾಂತರ ಕೆ ಎಸ್ ಆರ್ ಟಿ ಸಿ ಗೆ ಅಂತೆಯೇ ಕೆ ಎಸ್ ಆರ್ ಟಿ ಸಿ ಯಿಂದ ಹೊರ ಹೋಗುವ ಎಲ್ಲಾ ಬಸ್ಸುಗಳು ಕೆ ಪಿ ಟಿ, ನಂತೂರು, ಪಂಪ್ ವೆಲ್ ಮುಖಾಂತರ ಮುಂದುವರಿಯುವುದು.

2. ನಂತೂರು ಕಡೆಯಿಂದ ಸ್ಟೇಟ್ ಬ್ಯಾಂಕ್ ಕಡೆಗೆ ಬರುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಶಿವಭಾಗ್, ಹಾರ್ಟಿಕಲ್ಚರ್, ಬೆಂದೂರು, ಕರಾವಳಿ, ಕಂಕನಾಡಿ ಜಂಕ್ಷನ್ ತಲುಪಿ ಫಳ್ನೀರ್ ರಸ್ತೆ ಮುಖಾಂತರ ಸ್ಟೇಟ್ ಬ್ಯಾಂಕ್ ಕಡೆ ಮುಂದುವರಿಯುವುದು.

3. ಪಂಪ್ ವೆಲ್ ಕಡೆಯಿಂದ ಸ್ಟೇಟ್ ಬ್ಯಾಂಕ್‌ ಕಡೆಗೆ ಹೋಗುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು ಕಂಕನಾಡಿ ಜಂಕ್ಷನಿಗೆ ಬಂದು ಸ್ಟೇಟ್ ಬ್ಯಾಂಕ್‌ ಕಡೆಗೆ ಮುಂದುವರಿಯುವುದು.

4. ಕಾವೂರು, ಬೋಂದೇಲ್‌ ಕಡೆಯಿಂದ ಬರುವ ಬಸ್ಸುಗಳು ಹಾಗೂ ಇತರ ವಾಹನಗಳು ಕೆ ಎಸ್ ಆರ್ ಟಿ ಸಿ, ಲಾಲ್ ಭಾಗ್, ಪಿ ವಿ ಎಸ್. ಕೆ ಎಸ್ ಆರ್ ರಸ್ತೆ ಮುಖಾಂತರ ಹಂಪನಾ ಕಟ್ಟೆ ಗೆ ಬಂದು ಸ್ಟೇಟ್ ಬ್ಯಾಂಕ್ ಕಡೆಗೆ ಮುಂದುವರಿಯುವುದು.

5. ಸ್ಟೇಟ್ ಬ್ಯಾಂಕ್ ಕಡೆಯಿಂದ ಉಡುಪಿ, ಮೂಡಬಿದ್ರೆ ಕಡೆಗೆ ಹೋಗುವ ಎಲ್ಲಾ ಬಸ್ಸು ಹಾಗೂ ಇತರ ವಾಹನಗಳು ಕೆ ಎಸ್ ಆರ್ ರಸ್ತೆ ಮುಖಾಂತರ ಪಿ ವಿ ಎಸ್. ಲಾಲ್ ಭಾಗ್ ಜಂಕ್ಷನ್ ನಿಂದ ಮುಂದಕ್ಕೆ ಉಡುಪಿ ಕಡೆಗೆ ಸಂಚರಿಸುವುದು. ಕೆ ಎಸ್ ಆರ್ ಟಿ ಸಿ, ಕೆ ಪಿ ಟಿ ಮುಖಾಂತರ ಮೂಡುಬಿದ್ರೆ ಕಡೆಗೆ ಸಂಚರಿಸುವುದು. ಅಂತೆಯೇ ಮತ್ತೂರು, ತಲಪಾಡಿ, ಕಡೆಗೆ ಸಂಚಾರಿಸುವ ಎಲ್ಲಾ ಬಸ್ಸುಗಳು ಹಾಗೂ ಇತರ ವಾಹನಗಳು, ಹಂಪನಕಟ್ಟೆ ಜಂಕ್ಷನ್‌ನಿಂದ ಬಲಕ್ಕೆ ತಿರುಗಿ ಫಳ್ನೀರು ರಸ್ತೆ ಮುಖಾಂತರ ಕಂಕನಾಡಿ, ಕರಾವಳಿ ಜಂಕ್ಷನ್ ಮುಖೇನಾ ಮುಂದುವರಿಯಬೇಕಾಗಿ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು