10:04 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ನಡುರಾತ್ರಿ ನಡು ರಸ್ತೆಯಲ್ಲೇ ಮಲಗಿದ ಭೂಪ!: ಪ್ರಾಣ ಉಳಿಸಿದ ಬೈಕ್ ಇಂಡಿಕೇಟರ್ !!

09/10/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ಭೂಪನೊಬ್ಬ
ರಸ್ತೆ ಮಧ್ಯೆ ಮಲಗಿದ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ.

ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ
ಕುಡಿದ ಮತ್ತಿನಲ್ಲಿ ಬೈಕ್ ರೈಡ್ ಮಾಡಲಾಗದೆ ರಸ್ತೆ ಮಧ್ಯೆಯೇ ಹಾಯಾಗಿ ಮಲಗಿ ಬಿಟ್ಟಿದ್ದ.
ಬೈಕ್ ಸವಾರ ನಡು ರಾತ್ರಿ ಫುಲ್ ಟೈಟ್ ಆಗಿ ರಸ್ತೆಯನ್ನೇ ಬೆಡ್ ರೂಮ್ ಮಾಡಿದ್ದ. ಇದನ್ನು ನೋಡಿದ ವಾಹನ ಸವಾರರು
ಅಪಘಾತವಾಗಿರಬಹುದೆಂದು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದರು. ಆ್ಯಂಬುಲೆನ್ಸ್ ಬರುತ್ತಿದ್ದಂತೆ ಬೈಕ್ ಸವಾರ ಎದ್ದು ನಿಂತ. ಬಣಕಲ್ ಠಾಣಾ ಪೊಲೀಸರು ಬೈಕ್ ಸವಾರ ವಶಕ್ಕೆ ಪಡೆದು
ವಿಚಾರಣೆ ನಡೆಸಿದ್ದಾರೆ.
ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು