3:53 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ನಾನು ಸೋತಿರಬಹುದು ಸತ್ತಿಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಕೈ ತೊರೆದು ಕಮಲ ಹಿಡಿದಿದ್ದೆ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್

10/10/2023, 21:29

ಹಾವೇರಿ(reporterkarnataka.com): ನಾನು ಸೋತಿರಬಹುದು ಸತ್ತಿಲ್ಲ: ಸೋತರು ಗೆದ್ದರೂ ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವುದನ್ನು ಬಿಡುವುದಿಲ್ಲ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಹಿರೇಮಾದಾಪುರ ಗ್ರಾಮದ ಬಳಿ ಕುಮದ್ವತಿ ನದಿಗೆ ತಮ್ಮ ಅವಧಿಯಲ್ಲಿ 17 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಾಂದರ್ (ಬ್ಯಾರೇಜ್ ) ಕಂ ಸೇತುವೆ ವೀಕ್ಷಣೆ ಮಾಡಿ, ಬಳಿಕ ರೈತರು ಸಣ್ಣಗುಬ್ಬಿ ಗ್ರಾಮದ ರೈತ ದೇವರಾಜ್ ನಾಗಣ್ಣನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.


ತಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ. ತಮಗೆ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ ತೃಪ್ತಿ ತಂದಿದೆ. ನಾನು ಈ ಬಾರಿ ಸೋತಿರಬಹುದು. ಸೋತರು ನಾನು ಕೆಲಸ ಮಾಡುವುದನ್ನು ಬಿಡುವುದಿಲ್ಲ. ನನ್ನ ರಕ್ತ ಇರುವವರೆಗೂ ಕ್ಷೇತ್ರದಲ್ಲಿ ಜನರ ಸೇವೆ ಮಾಡುವುದು ನಿಲ್ಲಿಸಲ್ಲ ಎಂದು ಬಿ.ಸಿ ಪಾಟೀಲ್ ಅವರು ಹಲವಾರು ವಿಷಯಗಳ ಕುರಿತು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು