3:23 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಾನು ಸೋತಿರಬಹುದು ಸತ್ತಿಲ್ಲ, ಕ್ಷೇತ್ರದ ಅಭಿವೃದ್ಧಿಗಾಗಿ ಕೈ ತೊರೆದು ಕಮಲ ಹಿಡಿದಿದ್ದೆ: ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್

10/10/2023, 21:29

ಹಾವೇರಿ(reporterkarnataka.com): ನಾನು ಸೋತಿರಬಹುದು ಸತ್ತಿಲ್ಲ: ಸೋತರು ಗೆದ್ದರೂ ಜನರ ನಡುವೆ ಇದ್ದು ಅವರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುವುದನ್ನು ಬಿಡುವುದಿಲ್ಲ ಎಂದು ಮಾಜಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದರು.
ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಹಿರೇಮಾದಾಪುರ ಗ್ರಾಮದ ಬಳಿ ಕುಮದ್ವತಿ ನದಿಗೆ ತಮ್ಮ ಅವಧಿಯಲ್ಲಿ 17 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಬಾಂದರ್ (ಬ್ಯಾರೇಜ್ ) ಕಂ ಸೇತುವೆ ವೀಕ್ಷಣೆ ಮಾಡಿ, ಬಳಿಕ ರೈತರು ಸಣ್ಣಗುಬ್ಬಿ ಗ್ರಾಮದ ರೈತ ದೇವರಾಜ್ ನಾಗಣ್ಣನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು.


ತಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಿದ್ದು ಕ್ಷೇತ್ರದ ಅಭಿವೃದ್ಧಿಗಾಗಿ. ತಮಗೆ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ ತೃಪ್ತಿ ತಂದಿದೆ. ನಾನು ಈ ಬಾರಿ ಸೋತಿರಬಹುದು. ಸೋತರು ನಾನು ಕೆಲಸ ಮಾಡುವುದನ್ನು ಬಿಡುವುದಿಲ್ಲ. ನನ್ನ ರಕ್ತ ಇರುವವರೆಗೂ ಕ್ಷೇತ್ರದಲ್ಲಿ ಜನರ ಸೇವೆ ಮಾಡುವುದು ನಿಲ್ಲಿಸಲ್ಲ ಎಂದು ಬಿ.ಸಿ ಪಾಟೀಲ್ ಅವರು ಹಲವಾರು ವಿಷಯಗಳ ಕುರಿತು ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು