8:11 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣ: ಗುರುಪುರ ಮಠದ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರ ನೋಟಿಸ್

11/10/2023, 10:54

ಬೆಂಗಳೂರು(reporterkarnataka.com): ಬಿಜೆಪಿ ಟಿಕೆಟ್ ನೀಡುವುದಾಗಿ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಹುಕೋಟಿ ರೂಪಾಯಿ ವಂಚಿಸಿದ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರಿಗೆ ಬೆಂಗಳೂರಿನ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ಅವರು ರಾಜಶೇಖರಾನಂದ ಸ್ವಾಮೀಜಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. 48 ತಾಸಿನೊಳಗೆ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ.
ವಂಚನೆ ಪ್ರಕರಣ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಹಾಗೂ ಆಕೆಯ ಒಡನಾಡಿಗಳು ಪೊಲೀಸ್ ಬಲೆಗೆ ಬಿದ್ದ ನಂತರ ಚೈತ್ರಾ ಕುಂದಾಪುರ ಆದಾಯ ತೆರಿಗೆ ಇಲಾಖೆಗೆ ಬರೆದದ್ದು ಎನ್ನಲಾದ ಪತ್ರವೊಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತಾಡುತ್ತಿತ್ತು. ಅದರಲ್ಲಿ ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ ಕುರಿತು ಉಲ್ಲೇಖಿಸಲಾಗಿತ್ತು. ಈ ಕುರಿತು ವಜ್ರದೇಹಿ ಮಠದ ಸ್ವಾಮೀಜಿ ಸ್ಪಷ್ಠೀಕರಣ ಕೂಡ ನೀಡಿದ್ದರು. ಆದರೆ ಪ್ರಕರಣದ ಸತ್ಯಾಸತ್ಯತೆ ಶೋಧಕ್ಕಾಗಿ ಇದೀಗ ಬೆಂಗಳೂರು ಸಿಸಿಬಿ ಪೊಲೀಸರು ಗುರುಪುರ ಮಠದ ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತಳಾಗಿರುವ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಪ್ರಸ್ತುತ ಬೆಂಗಳೂರಿನ‌ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು