9:25 PM Sunday29 - March 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದುರ್ವರ್ತನೆ: ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿಗಳ ಸಂಘ ಖಂಡನೆ

11/10/2023, 20:25

ಬೆಂಗಳೂರು(reporterkarnataka.com): ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ವಲಯ ಅರಣ್ಯ ಅಧಿಕಾರಿ ಗಳ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದುರ್ವರ್ತನೆಯನ್ನು ಕರ್ನಾಟಕ ವರಣ್ಯ ಅರಣ್ಯಾಧಿಕಾರಿಗಳ ಸಂಘ ಖಂಡಿಸಿದೆ.

ಮಂಗಳೂರು ವಿಭಾಗದ, ಉಪ್ಪಿನಂಗಡಿ ವಲಯದ, ಬೆಳ್ತಂಗಡಿ ತಾಲ್ಲೂಕಿನ, ಕಳೆಂಜ ಗ್ರಾಮದ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯವರು ಒತ್ತುವರಿ ತೆರವುಗೊಳಿಸುವ ಸಮಯದಲ್ಲಿ ಬೆಳ್ತಂಗಡಿ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಯನ್ನು ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿರುವುದು ಖಂಡನೀಯ, “ಆ” ಅವಾಚ್ಯ ಶಬ್ದದ ಬಗ್ಗೆ ಕನಿಷ್ಠ ಸೌಜನ್ಯಕ್ಕಾದರೂ ಕ್ಷಮೆ ವ್ಯಕ್ತಪಡಿಸದಿರುವುದು ಗೌರವಾನ್ವಿತ ಶಾಸಕರಿಗೆ ಶೋಭೆತರುವಂತಹುದಲ್ಲ, ಈ ಕೃತ್ಯವನ್ನು ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಯವರ ಸಂಘ (೨) ಬೆಂಗಳೂರು ಸಂಘವು ಕಠಿಣ ಪದಗಳಲ್ಲಿ ಖಂಡಿಸಿದೆ.
ಅಧಿಕಾರಿಗಳಾಗಲೀ, ಸಾರ್ವಜನಿಕರಾಗಲೀ, ಜನಪ್ರತಿನಿಧಿಗಳಾಗಲೀ ಗೌರವಾನ್ವಿತ ಶಾಸಕರುಗಳಾಗಲೀ ಈ ನೆಲದ ಕಾನೂನನ್ನು ಪಾಲಿಸಬೇಕಾಗಿರುತ್ತದೆ. ಕಾನೂನಿಗಿಂತ ಯಾರೂ ಮಿಗಿಲಾಗಿರುವುದಿಲ್ಲ. ಒಂದು ವೇಳೆ ವಲಯ ಅರಣ್ಯಾಧಿಕಾರಿಗಳು ಏನೇ ಕರ್ತವ್ಯಚ್ಯುತಿ ಮಾಡಿದ್ದರೂ ಅದನ್ನು ಕಾನೂನಿನ ವ್ಯಾಪ್ತಿಯಲ್ಲೇ ಬಗೆಹರಿಸಿಕೊಳ್ಳಬೇಕಾಗಿರುವುದು ಶಾಸಕರಿಗೆ ತಿಳಿಯದೇ ಇರುವ ವಿಷಯವೇನಲ್ಲ. ಆಗಿದ್ದಾಗ್ಯೂ ಮಾನ್ಯ ಗೌರವಾನ್ವಿತ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಗೆ ತನ್ನ ಶಾಸನ ಬದ್ಧ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕರ್ತವ್ಯಕ್ಕೆ ಅಡ್ಡಿಉಂಟುಮಾಡಿ ಅವಾಚ್ಯವಾಗಿ ನಿಂಧಿಸಿರುವುದು ಅವರ ಘನತೆಗೆ ತಕ್ಕದ್ದಾಗಿರುವುದಿಲ್ಲ. ಈ ಘಟನೆಯನ್ನು ಸಂಘವು ಖಂಡಿಸುತ್ತಾ ಅರಣ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಯವರಿಗೆ ಕಾನೂನಿನ ಅನ್ವಯ ಸಾರ್ವಜನಿಕ ಕೆಲಸ ನಿರ್ವಹಿಸಲು ನೈತಿಕ ಸೈರ್ಯವನ್ನು ಸಂಘವು ನೀಡುತ್ತದೆ. ಮುಂದೆ ಇಂತಹ ಘಟನೆ ಮರುಕಳಿಸಿದ್ದಲ್ಲಿ ಹೋರಾಟಕ್ಕೂ ಸಹ ಸಂಘವು ಸಿದ್ಧವಿರುತ್ತದೆ ಎಂದು ಈ ಮೂಲಕ ಸಂಘವು ಆಗ್ರಹಿಸುತ್ತದೆ ಎಂದು ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ASSOCIATION ವಲಯ ಅರಣ್ಯ ಅಧಿಕಾರಿಗಳ ಸಂಘ(ರಿ)ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು