7:54 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದುರ್ವರ್ತನೆ: ಕರ್ನಾಟಕ ರಾಜ್ಯ ಅರಣ್ಯ ಅಧಿಕಾರಿಗಳ ಸಂಘ ಖಂಡನೆ

11/10/2023, 20:25

ಬೆಂಗಳೂರು(reporterkarnataka.com): ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ವಲಯ ಅರಣ್ಯ ಅಧಿಕಾರಿ ಗಳ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದುರ್ವರ್ತನೆಯನ್ನು ಕರ್ನಾಟಕ ವರಣ್ಯ ಅರಣ್ಯಾಧಿಕಾರಿಗಳ ಸಂಘ ಖಂಡಿಸಿದೆ.

ಮಂಗಳೂರು ವಿಭಾಗದ, ಉಪ್ಪಿನಂಗಡಿ ವಲಯದ, ಬೆಳ್ತಂಗಡಿ ತಾಲ್ಲೂಕಿನ, ಕಳೆಂಜ ಗ್ರಾಮದ ಬ್ಲಾಕ್-2 ಮೀಸಲು ಅರಣ್ಯ ಪ್ರದೇಶದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯವರು ಒತ್ತುವರಿ ತೆರವುಗೊಳಿಸುವ ಸಮಯದಲ್ಲಿ ಬೆಳ್ತಂಗಡಿ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಯನ್ನು ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿರುವುದು ಖಂಡನೀಯ, “ಆ” ಅವಾಚ್ಯ ಶಬ್ದದ ಬಗ್ಗೆ ಕನಿಷ್ಠ ಸೌಜನ್ಯಕ್ಕಾದರೂ ಕ್ಷಮೆ ವ್ಯಕ್ತಪಡಿಸದಿರುವುದು ಗೌರವಾನ್ವಿತ ಶಾಸಕರಿಗೆ ಶೋಭೆತರುವಂತಹುದಲ್ಲ, ಈ ಕೃತ್ಯವನ್ನು ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಯವರ ಸಂಘ (೨) ಬೆಂಗಳೂರು ಸಂಘವು ಕಠಿಣ ಪದಗಳಲ್ಲಿ ಖಂಡಿಸಿದೆ.
ಅಧಿಕಾರಿಗಳಾಗಲೀ, ಸಾರ್ವಜನಿಕರಾಗಲೀ, ಜನಪ್ರತಿನಿಧಿಗಳಾಗಲೀ ಗೌರವಾನ್ವಿತ ಶಾಸಕರುಗಳಾಗಲೀ ಈ ನೆಲದ ಕಾನೂನನ್ನು ಪಾಲಿಸಬೇಕಾಗಿರುತ್ತದೆ. ಕಾನೂನಿಗಿಂತ ಯಾರೂ ಮಿಗಿಲಾಗಿರುವುದಿಲ್ಲ. ಒಂದು ವೇಳೆ ವಲಯ ಅರಣ್ಯಾಧಿಕಾರಿಗಳು ಏನೇ ಕರ್ತವ್ಯಚ್ಯುತಿ ಮಾಡಿದ್ದರೂ ಅದನ್ನು ಕಾನೂನಿನ ವ್ಯಾಪ್ತಿಯಲ್ಲೇ ಬಗೆಹರಿಸಿಕೊಳ್ಳಬೇಕಾಗಿರುವುದು ಶಾಸಕರಿಗೆ ತಿಳಿಯದೇ ಇರುವ ವಿಷಯವೇನಲ್ಲ. ಆಗಿದ್ದಾಗ್ಯೂ ಮಾನ್ಯ ಗೌರವಾನ್ವಿತ ಶಾಸಕರು ಸಾರ್ವಜನಿಕವಾಗಿ ವಲಯ ಅರಣ್ಯಾಧಿಕಾರಿಗೆ ತನ್ನ ಶಾಸನ ಬದ್ಧ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಕರ್ತವ್ಯಕ್ಕೆ ಅಡ್ಡಿಉಂಟುಮಾಡಿ ಅವಾಚ್ಯವಾಗಿ ನಿಂಧಿಸಿರುವುದು ಅವರ ಘನತೆಗೆ ತಕ್ಕದ್ದಾಗಿರುವುದಿಲ್ಲ. ಈ ಘಟನೆಯನ್ನು ಸಂಘವು ಖಂಡಿಸುತ್ತಾ ಅರಣ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಯವರಿಗೆ ಕಾನೂನಿನ ಅನ್ವಯ ಸಾರ್ವಜನಿಕ ಕೆಲಸ ನಿರ್ವಹಿಸಲು ನೈತಿಕ ಸೈರ್ಯವನ್ನು ಸಂಘವು ನೀಡುತ್ತದೆ. ಮುಂದೆ ಇಂತಹ ಘಟನೆ ಮರುಕಳಿಸಿದ್ದಲ್ಲಿ ಹೋರಾಟಕ್ಕೂ ಸಹ ಸಂಘವು ಸಿದ್ಧವಿರುತ್ತದೆ ಎಂದು ಈ ಮೂಲಕ ಸಂಘವು ಆಗ್ರಹಿಸುತ್ತದೆ ಎಂದು ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ASSOCIATION ವಲಯ ಅರಣ್ಯ ಅಧಿಕಾರಿಗಳ ಸಂಘ(ರಿ)ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು