2:22 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಪೂರ್ಣ: ರೈತ ಸಮಾವೇಶದಲ್ಲಿ ಶಾಸಕ ರಾಜು ಕಾಗೆ ವಿಶ್ವಾಸ

12/10/2023, 13:32

ಶಿವರಾಯ ಲಕ್ಷ್ಮಣ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ನಾನು ಮತ್ತು ಶಾಸಕ ಲಕ್ಷ್ಮಣ ಸವದಿ ಅವರು ಕೂಡಿಕೊಂಡು ಅಥಣಿ ಮತ್ತು ಕಾಗವಾಡ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಇಬ್ಬರು ಚರ್ಚಿಸಿ ಒಂದೇ ನಿರ್ಣಯ ತೆಗೆದುಕೊಂಡು ಅಭಿವೃದ್ಧಿ ಕಡೆ ಗಮನಹರಿಸಿದ್ದೇವೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಜಿಲ್ಲೆಯ ಕಾಗವಾಡ ಕ್ಷೇತ್ರದ ಮದಬಾವಿ ಗ್ರಾಮದಲ್ಲಿ ಮತದಾರರ ಅಭಿನಂದನೆ ಹಾಗೂ ರೈತ ಸಮಾವೇಶದಲ್ಲಿ ಕಾಗವಾಡ ಶಾಸಕರಾಜು ಕಾಗೆ ಮತ್ತು ಅಥಣಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬಸವೇಶ್ವರ ಏತ ನೀರಾವರಿ ಯೋಜನೆಯ ಇನ್ನುಳಿದ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಕಾಗವಾಡ ಮತಕ್ಷೇತ್ರದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಲು ಶ್ರಮಿಸಲಾಗುವುದು ಎಂದರು. ರೈತರು ಜನಸಾಮಾನ್ಯರು ಕಾರ್ಯಕರ್ತರು ತಮ್ಮ ಸಮಸ್ಯೆಗಳಿದ್ದರೆ ನೇರವಾಗಿ ಸಂಪರ್ಕಿಸಿ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ಸದಾ ನಿಮ್ಮ ಜೊತೆ ಇದ್ದು ಸ್ಪಂದಿಸುತ್ತೇನೆ ಎಂದು ಅವರು ಹೇಳಿದರು.
ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾಜ ಪಾಟೀಲ, ಕೆಪಿಸಿಸಿ ಸದಸ್ಯರಾದ ದಿಗ್ವಿಜಯ ಪವಾರ ದೇಸಾಯಿ, ಚಂದ್ರಕಾಂತ ಇಮ್ಮಡಿ, ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಹಾನಂದ ನಿವರ್ಗಿ, ವಿನಾಯಕ ಬಾಗಡಿ, ರವಿ ಪೂಜಾರಿ, ಪ್ರವೀಣ ನಾಯಿಕ,ಸಿದರಾಯ ತೋಡಕರ ಅಸ್ಲಾಂ ಮುಲ್ಲಾ, ನಿಜಗುಣಿ ಮಗದುಮ್ಮ,ಬಸಗೌಡಾ ಪಾಟೀಲ, ಕಾಮಗೌಡಾ ಪಾಟೀಲ,ನಾಯ್ಕುಬಾ ಶಿಂದೆ ಅಶೋಕ ಪೂಜಾರಿ,ಅಣ್ಣಾಸಾಬ ಪಾಟೀಲ,ಅಪ್ಪು ಚೌಗಲಾ, ವಿಠ್ಠಲ ಅವಳೆ, ಅಣ್ಣಪ್ಪ ನಿಂಬಾಳಕರ, ಸಂಜಯ ಅಡಾಟೆ, ಪರಗೊಂಡ ಮುಧೋಳ ಶಿವಾನಂದ ಮಗದುಮ್ಮ, ಸಂಜಯ ತಳವಾರಕರ, ಮಪ್ಪು ಪೂಜಾರಿ ಮೋಹನ ಬಾಗಡಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು