9:37 AM Friday19 - December 2025
ಬ್ರೇಕಿಂಗ್ ನ್ಯೂಸ್
ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ

ಇತ್ತೀಚಿನ ಸುದ್ದಿ

ರೈತರಿಗೆ 7 ತಾಸು ಕರೆಂಟ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ

12/10/2023, 15:45

ಚಿಕ್ಕಬಳ್ಳಾಪುರ(reporterkarnataka.com): ಕರೆಂಟ್ ಕೊಡುವುದು ಸರಕಾರದ ಕರ್ತವ್ಯ. ಅದು ಅವರದ್ದೇನು ಉಪಕಾರ ಅಲ್ಲ.
ಸರಕಾರ ರೈತರಿಗೆ 7 ತಾಸು ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ನಡೆದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ಧಾರೆ.
ಈಗ ಇಂಧನ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅಂತ ಅಧಿಕಾರಿಗಳನ್ನು ಕೇಳಿ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ವಿದ್ಯುತ್ ಇಲಾಖೆಗೆ 10 ಸಾವಿರ ಕೊಟಿ ರೂ. ನೀಡಿದ್ದೆ. ಇವರು ಯಾವುದೇ ಅನುದಾನ ನೀಡಿಲ್ಲ. ಅನುದಾನ ನೀಡಲು ಇವರ ಬಳಿ ಹಣ ಇಲ್ಲ. ಕಲ್ಲಿದ್ದಲು ಖರೀದಿಸಲು ಹಣ ಇಲ್ಲ. ಸರ್ಕಾರದವರು ರೈತರಿಗೆ ಕೇವಲ ಎರಡು ತಾಸು ಕರೆಂಟ್ ಕೊಡುತ್ತಿದ್ದಾರೆ. ಮೂರು ತಿಂಗಳಲ್ಲಿ ಎರಡು ಬಾರಿ ಕರೆಂಟ್ ಬಿಲ್ ಹೆಚ್ಚಿಸಿದ್ದು, ಇದು ರೈತ ವಿರೊಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು