1:49 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 262 ಮಂದಿ ರೌಡಿಗಳ ಪರೇಡ್: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಾಕಿ ಖಡಕ್ ಎಚ್ಚರಿಕೆ

12/10/2023, 21:21

ಮಂಗಳೂರು(reporterkarnataka.com): ನಗರದ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ
ಸಕ್ರೀಯ ರೌಡಿಗಳ ಪರೇಡ್‌ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಗುರುವಾರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.


ಪರೇಡ್‌ನಲ್ಲಿ ಒಟ್ಟು 262 ಸಕ್ರೀಯ ರೌಡಿಗಳನ್ನು ಸಂಬಂಧಪಟ್ಟ ಎಸಿಪಿ ಅವರು ಪೊಲೀಸ್ ಆಯುಕ್ತರ ಮುಂದೆ ಹಾಜರುಪಡಿಸಿದರು. ಎಲ್ಲಾ ರೌಡಿಗಳಿಗೆ ತಮ್ಮ ಅಪರಾಧಿಕ ಚಟುವಟಿಕೆಗಳನ್ನು ಬಿಟ್ಟು ಕಾನೂನನ್ನು ಗೌರವಿಸುವ ಪ್ರಜೆಗಳಾಗಬೇಕೆಂದು ಪೊಲೀಸ್ ಆಯುಕ್ತರು ಉಪದೇಶಿಸಿದರು. ಇದಲ್ಲದೇ ರೌಡಿಗಳಿಗೆ ಇನ್ನು ಮುಂದೆ ಯಾವುದಾದರೂ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಅವರ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದೆಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದರು.
ಈ ಪರೇಡ್‌ನಲ್ಲಿ ಸಿದ್ದಾರ್ಥ ಗೋಯಲ್ ( ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ), ಬಿ.ಪಿ. ದಿನೇಶ್ ಕುಮಾರ್ (ಡಿಸಿಪಿ ಅಪರಾಧ ಮತ್ತು ಸಂಚಾರ), ನಗರದ ಎಲ್ಲಾ ಎಸಿಪಿ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು