4:02 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಮಕ್ಕಳ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಸಂದೀಪ್ ಪಿ. ಟಿ. ಈಗ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗೆ ಲಭ್ಯ

13/10/2023, 12:49

ಕಾರ್ಕಳ(reporterkarnataka.com): ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯು ತನ್ನ ಹೆಸರಾಂತ ಆರೋಗ್ಯ ತಜ್ಞರ ಸಮಿತಿಗೆ ಹೊಸ ತಜ್ಞರ ಸೇರ್ಪಡೆಯನ್ನು ಪ್ರಕಟಿಸಿದೆ. 13ನೇ ಅಕ್ಟೋಬರ್ 2023 ರಿಂದ ಜಾರಿಗೆ ಬರುವಂತೆ ತಿಂಗಳ ಪ್ರತೀ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ. ಸಂದೀಪ್ ಪಿ. ಟಿ. ಅವರು ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಸಮಾಲೋಚನೆಗಾಗಿ ಲಭ್ಯವಿರುತ್ತಾರೆ.
ಅವರು ತಮ್ಮ ಪರಿಣತಿ ಮತ್ತು ಅನುಭವದಿಂದ ಈಗಾಗಲೇ ಈ ಕ್ಷೇತ್ರದಲ್ಲಿ ಪ್ರಸಿದ್ದಿಯಾಗಿದ್ದಾರೆ. ಈಗ ಇಲ್ಲಿ ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶುಕ್ರವಾರ ಅಪರಾಹ್ನ ಗಂಟೆ 3:00 ರಿಂದ 5:00 ರವರೆಗೆ ಅಪಾಯಿಂಟ್‌ಮೆಂಟ್ ಆಧಾರದ ಮೇಲೆ ಸಮಾಲೋಚನೆಗಳಿಗೆ ಲಭ್ಯವಿರುತ್ತಾರೆ.
ಈ ಸೇರ್ಪಡೆಯು ಆಸ್ಪತ್ರೆಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಈಗಿರುವ ಸಾಮಾನ್ಯ ವೈದ್ಯಕೀಯ, ಸಾಮಾನ್ಯ ಮತ್ತು ಲ್ಯಾಪರೊಸ್ಕೋಪಿಕ್ ಶತ್ರಚಿಕಿತ್ಸೆ , ಮಕ್ಕಳ ವಿಭಾಗ, ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ, ಮೂಳೆ ಮತ್ತು ಕೀಲು ಶಸ್ತ್ರಚಿಕಿತ್ಸೆ, ನೇತ್ರಚಿಕಿತ್ಸೆ , ಹ್ರದ್ರೋಗ , ಕಿವಿ ಮೂಗು ಗಂಟಲು, ನರವಿಜ್ಞಾನ (ನ್ಯೂರೊಲಜಿ), ಮೂತ್ರಪಿಂಡ (ನೆಫ್ರಾಲಜಿ), ಮೂತ್ರಶಾಸ್ತ್ರ (ಯುರೊಲೊಜಿ), ಉಪಶಾಮಕ ಔಷಧ , ಮಕ್ಕಳ ರಕ್ತಶಾಸ್ತ್ರ & ಕ್ಯಾನ್ಸರ್, ಶಸ್ತ್ರಚಿತ್ಸಾ ಕ್ಯಾನ್ಸರ್ , ಚರ್ಮ, ಮಾನಸಿಕ ಆರೋಗ್ಯ , ಸಂತಾನೋತ್ಪತ್ತಿ ಔಷದಿ, ರೇಡಿಯೋಲೋಜಿ ಮತ್ತು ಪ್ಯಾಥೋಲಾಜಿ (ಅತ್ಯಾಧುನಿಕ ತಂತ್ರಜ್ಞಾನದ ಲ್ಯಾಬ್ ಪರೀಕ್ಷಾ) ಸೇವೆಗಳಿಗೆ ಪೂರಕವಾಗಿದೆ.
ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಮುಖ್ಯ ವೈದ್ಯಧಿಕಾರಿ ಡಾ ಕೀರ್ತಿನಾಥ ಬಲ್ಲಾಳ ಮಾತನಾಡಿ, “ನಮ್ಮ ಆರೋಗ್ಯ ವೃತ್ತಿಪರರ ತಂಡಕ್ಕೆ ಡಾ. ಸಂದೀಪ್ ಅವರನ್ನು ಸ್ವಾಗತಿಸಲು ನಾವು ಸಂತೋಷಪಡುತ್ತೇವೆ. ಈ ವಿಭಾಗದ ಸೇರ್ಪಡೆಯು, ಸಕಾಲದಲ್ಲಿ ರೋಗ ನಿರ್ಣಯಮಾಡಿ ನಮ್ಮ ಗುಣಮಟ್ಟದ ವೈದ್ಯಕೀಯ ಆರೈಕೆ ಮೂಲಕ ಸಮುದಾಯಕ್ಕೆ ನೀಡಲು ಇನ್ನಷ್ಟು ಸಹಕಾರಿಯಾಗಲಿದೆ” ಎಂದು ಹೇಳಿದರು.

ಅಪಾಯಿಂಟ್‌ಮೆಂಟ್ ನಿಗದಿಪಡಿಸಲು ಅಥವಾ ಹೆಚ್ಚಿನ ಮಾಹಿತಿಗಾಗಿ, ದೂರವಾಣಿ ಸಂಖ್ಯೆ 9731601150 ಅಥವಾ 08258 230583 ಅನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು