1:03 PM Thursday17 - April 2025
ಬ್ರೇಕಿಂಗ್ ನ್ಯೂಸ್
ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ…

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು