10:44 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು