2:13 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು