6:10 PM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು