6:55 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿ 5 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿ ಪರಾರಿ: ಹಾಡಹಗಲೇ ಇಬ್ಬರು ಯುವಕರಿಂದ ಕೃತ್ಯ

29/07/2021, 16:59

ಶರಣೇ ಗೌಡ ಸಿಂಧನೂರು ರಾಯಚೂರು
info.reporterkarnataka@gmail.com

ಚಿನ್ನದ ವಸ್ತುಗಳನ್ನು ಪಾಲಿಷ್ ಮಾಡಿ ಕೊಡುವುದಾಗಿ ನಂಬಿಸಿದ ಯುವಕರ ತಂಡವೊಂದು ಹಾಡಹಗಲೇ ಚಿನ್ನದ ಆಭರಣಗಳೊಂದಿಗೆ ಪರಾರಿಯಾದ ಘಟನೆ 

ಸಿಂಧನೂರು ಪಟ್ಟಣದಲ್ಲಿ ಗುರುವಾರ ಬೆಳಕಿಗೆ ಬಂದಿದೆ.

ಪಟ್ಟಣದ ಬಳಗಾನೂರು ರಸ್ತೆ ಸಮೀಪದಲ್ಲಿ ಇರುವ ನಿವೃತ್ತ ಶಿಕ್ಷಕ ಯಲ್ಲಪ್ಲ ಜಾಲಿಹಾಳ  ನಿವಾಸಕ್ಕೆ ಬೆಳಗ್ಗೆ  ಬೈಕ್ ಮೇಲೆ ಆಗಮಿಸಿದ ಇಬ್ಬರು ಯುವಕರು ತಾವು ಚಿನ್ನದ ಅಭರಣಗಳನ್ನು ಪಾಲಿಷ್ ಮಾಡಿಕೊಡುತ್ತೇವೆ ಎಂದು ನಂಬಿಸಿದ್ದಾರೆ, ಅಡಿಗೆ ಮಾಡುವ ಕುಕ್ಕರನಲ್ಲಿ ಚಿನ್ನ ಹಾಕಿ ಕೊಡಿ ಎಂದು ವಂಚಕರು ಹೇಳಿದಾಗ ಕುಟುಂಬದ ಸದಸ್ಯರು ಕುಕ್ಕರನಲ್ಲಿ 10 ತೊಲೆಯ ಚಿನ್ನದ ಆಭರಣಗಳನ್ನು ಹಾಕಿ ಕೊಟ್ಟಿದ್ದಾರೆ. ಕುಕ್ಕರ್ ಕಾಯಿಸುವ ವೇಳೆ  ಕುಟುಂಬದ ಸದಸ್ಯರಿಗೆ ಯಾಮಾರಿಸಿದ ವಂಚಕರ ತಂಡ  5 ಲಕ್ಷ ಬೆಲೆ ಬಾಳುವ 10 ತೊಲೆ ಚಿನ್ನದೊಂದಿಗೆ ಪರಾರಿಯಾಗಿದ್ದಾರೆ.  ಇದರಿಂದ ಗಾಬರಿಗೊಂಡ ಯಲ್ಲಪ್ಪ ಅವರು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮುಟ್ಟಿಸಿದ್ದಾರೆ. ‌ ಸ್ಥಳಕ್ಕೆ ದೌಡಾಯಿಸಿದ ಸಬ್ ಇನ್ ಸ್ಪೆಕ್ಟರ್ ಭೀಮದಾಸ್ ತನಿಖೆ ಕೈಗೊಂಡಿದ್ದಾರೆ.

ಹಾಡು ಹಗಲೇ ಪಟ್ಟಣದಲ್ಲಿ  ಮನೆಗಳಿಗೆ ಹೋಗಿ, ವಂಚಿಸಿ ಚಿನ್ನದ ಆಭರಣಗಳನ್ನು ಕಳವು ಮಾಡುತ್ತಿದ್ದರಿಂದ ಸಾರ್ವಜನಿಕರಲ್ಲಿ ಅತಂಕ ಸೃಷ್ಟಿಯಾಗಿದೆ. ಪೊಲೀಸ್ ಇಲಾಖೆ ವಂಚಕರ ಜಾಲ ಬಯಲು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು