3:03 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನೋಡುಗರ ಕೌತುಕಕ್ಕೆ ಕಾರಣವಾಗಿ ವಿಚಿತ್ರ ಅಣಬೆ!: ಪ್ರಕೃತಿ ವೈಚಿತ್ರ್ಯದ ಸೊಬಗು ಇಲ್ಲಿದೆ ನೋಡಿ!

14/10/2023, 12:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪದ ಗಿರೀಶ್ ಎಂಬುವರ ತೋಟದಲ್ಲಿ ವಿಚಿತ್ರ ಅಣಬೆವೊಂದು ಹುಟ್ಟಿದ್ದು ನೋಡುಗರ ಕೌತುಕಕ್ಕೆ ಕಾರಣವಾಗಿದೆ. ಸಾಮಾನ್ಯವಾಗಿ ಅಣಬೆಗಳು ಹುಟ್ಟೋದೇ ರಾತ್ರಿ ವೇಳೆ. ರಾತ್ರಿ ಹುಟ್ಟಿ ಸಂಜೆ ವೇಳೆಗೆ ಬಾಡಿ ಹೋಗುತ್ತೆ. ಆದ್ರೆ, ನಿನ್ನೆ ಸಂಜೆ ಇಲ್ಲದ ಈ ವಿಚಿತ್ರ ಅಣಬೆ ಬೆಳಗಾಗುವಷ್ಟರಲ್ಲಿ ವಿಚಿತ್ರವಾಗಿ ಬೆಳೆದಿದೆ. ಈ ರೀತಿಯ ಅಣಬೆಗಳು ಬೆಳೆಯುತ್ತೆ. ಆದರೆ, ತುಂಬಾ ವಿರಳ. ಇದನ್ನ ಮೆಟ್ಟಿಲು ಅಣಬೆ ಅಥವ ಬಲೆ ಅಣಬೆ ಅಂತಾನೂ ಕರೆಯುತ್ತಾರೆ. ಗುಡುಗು-ಸಿಡಿಲು-ಮಿಂಚು ಬರುವ ವೇಳೆ ಈ ರೀತಿಯ ಅಣಬೆಗಳು ಹುಟ್ಟುತ್ತೆ ಅನ್ನೋದು ಹಿರಿಯ ನಂಬಿಕೆ. ನಿನ್ನೆ ಸಂಜೆ ಚಿಕ್ಕಮಗಳೂರು

ತಾಲೂಕಿನ ಮಲೆನಾಡು ಭಾಗದಲ್ಲಿ ಸಮೃದ್ಧ ಮಳೆಯಾಗಿದೆ.

ಮಲ್ಲಂದೂರು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಗುಡುಗು-ಮಿಂಚು-ಸಿಡಿಲು ಕೂಡ ಇತ್ತು. ಹಾಗಾಗಿ, ನಿನ್ನೆ ಸಂಜೆ ಇಲ್ಲದ ಈ ಅಣಬೆ ಬೆಳಗಾಗುವಷ್ಟರಲ್ಲಿ ಈ ರೀತಿ ವಿಚಿತ್ರವಾಗಿ ಬೆಳೆದಿದ್ದು ನೋಡುಗುರ ಪ್ರಕೃತಿಯಲ್ಲಿನ ವೈಚಿತ್ರ್ಯದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆದರೆ, ಇತ್ತೀಚಿನ ಹಲವು ವರ್ಷಗಳಲ್ಲಿ ಈ ರೀತಿಯ ಇಷ್ಟು ದೊಡ್ಡ ಬಲೆ ಅಣಬೆ ಬೆಳೆದಿರಲಿಲ್ಲ. ಈ ಬಾರಿ ಮಳೆಗಾಲದಲ್ಲಿ ಸಮರ್ಪಕ ಮಳೆ ಆಗಿಲ್ಲ. ಈಗ ಧಾರಾಕಾರ ಮಳೆ ಸುರಿಯುತ್ತಿದೆ. ಈಗ ಬೆಳೆದಿರುವುದು ಪ್ರಕೃತಿಯ ಅಸಮಾತೋಲನದಿಂದಲೇ ಈ ರೀತಿಯ ಬಲೆ ಅಣಬೆ ಹುಟ್ಟಿದೆ ಅನ್ನೋದು ಸ್ಥಳಿಯರು ಮಾತು.

ಇತ್ತೀಚಿನ ಸುದ್ದಿ

ಜಾಹೀರಾತು