12:13 PM Wednesday30 - July 2025
ಬ್ರೇಕಿಂಗ್ ನ್ಯೂಸ್
Bangaluru | ಪತ್ರಿಕಾ ಸಂಪಾದಕರ ಕೈಕಟ್ಟಿ ಹಾಕಲಾಗುತ್ತಿದೆ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ… Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಬೈಲೂರು ಥೀಮ್ ಪಾರ್ಕ್ ನಿಂದ ಸುಮಾರು 3 ಕೋಟಿ ವೆಚ್ಚದ ಪರಶುರಾಮ ಮೂರ್ತಿ ಮಾಯ!: ಈಗ ಇರುವುದು ಬರೇ ಪ್ಲಾಸ್ಟಿಕ್ ಹೊದಿಕೆ ಮಾತ್ರ!

14/10/2023, 20:59

ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಕಾರ್ಕಳದ ಬೈಲೂರಿನಲ್ಲಿರುವ ಥೀಮ್ ಪಾರ್ಕ್ ನಿಂದ ಪರಶುರಾಮ ಮೂರ್ತಿ ಮಾಯವಾಗಿದೆ. ಪ್ಲಾಸ್ಟಿಕ್ ನಿಂದ ಮುಚ್ಚಿಟ್ಟಿರುವ ಮೂರ್ತಿಯನ್ನು ರಾತೋರಾತ್ರಿ ಸ್ಥಳಾಂತರಿಸಲಾಗಿದೆ. ಇದೀಗ ಥೀಮ್ ಪಾರ್ಕ್ ನಲ್ಲಿ ಇರುವುದು ಮೂರ್ತಿ ಕಾಣದಂತೆ ಹೊದಿಸಿರುವ ಪ್ಲಾಸ್ಟಿಕ್ ಮಾತ್ರ.


ತುಳುವರ ಆರಾಧ್ಯಮೂರ್ತಿ ಪರಶುರಾಮ ದೇವರ ಮೂರ್ತಿಯನ್ನು
ಶುಕ್ರವಾರ ತಡರಾತ್ರಿಯೇ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಕಾರ್ಕಳ ಸಿದ್ಧವಾಗಿದೆ.
ಸುಮಾರು 33 ಅಡಿ ಎತ್ತರ, 50 ಟನ್ ಭಾರದ ಈ ಪರಶುರಾಮ ಮೂರ್ತಿಯನ್ನು ಹೆಚ್ಚು ಕಡಿಮೆ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ವಿಧಾನಸಭೆ ಚುನಾವಣೆಗೆ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಉದ್ಘಾಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು