4:06 PM Tuesday29 - July 2025
ಬ್ರೇಕಿಂಗ್ ನ್ಯೂಸ್
Mandya | ಒಂದೇ ದಿನ 1146 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ… ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ: ಬ್ಯಾರಿಕೆಡ್ ಹಾಕಿರುವ ಪೊಲೀಸರು Shivamogga | ತೀರ್ಥಹಳ್ಳಿ: ಬೆಜ್ಜವಳ್ಳಿ ಸಮೀಪ ಸ್ಕೂಟಿಗೆ ಹಿಂಭಾಗದಿಂದ ಬಸ್ ಡಿಕ್ಕಿ; ಸವಾರ… ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ…

ಇತ್ತೀಚಿನ ಸುದ್ದಿ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ: ದ್ವಿತೀಯ ವರ್ಷದ ಕುಡ್ಲದ ಪಿಲಿಪರ್ಬ-2023ರ ಚಪ್ಪರ ಮುಹೂರ್ತ

15/10/2023, 18:48

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ,ನಡೆಯಲಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ದ ಚಪ್ಪರ ಮುಹೂರ್ತ ಕಾರ್ಯಕ್ರಮ ನಗರದ ಕೇಂದ್ರ ಮೈದಾನದಲ್ಲಿ ಭಾನುವಾರ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, “ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈಗ ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಜನಪ್ರಿಯತೆ ಜೊತೆಗೆ ಈ ಕಲೆಗೆ ಇನ್ನಷ್ಟು ಮೆರುಗು ನೀಡುವ ನಿಟ್ಟಿನಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಇದೇ ಅಕ್ಟೋಬರ್ 21ರ ಶನಿವಾರದಂದು ನಡೆಯಲಿರುವ ದ್ವಿತೀಯ ವರ್ಷದ ಪಿಲಿಪರ್ಬ ನಡೆಯಲಿದೆ ಎಂದರು.


ಈ ಸಂದರ್ಭದಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ, ಮನಪಾ ಸದಸ್ಯರುಗಳಾದ ಶಕೀಲಾ ಕಾವ, ಜಯಲಕ್ಷ್ಮಿ, ಭರತ್ ಸೂಟರ್ ಪೇಟೆ, ನರೇಶ್ ಶೆಣೈ , ಉದಯ ಪೂಜಾರಿ, ಅಶ್ವಿತ್ ಕೊಟ್ಟಾರಿ, ಲಲಿತ್ ರಾಜ್ ಮೆಂಡನ್, ಕಮಲಾಕ್ಷ ಬಜಿಲ್ಕೇರಿ, ಮೋಹನ್ ಪೂಜಾರಿ, ಜಗದೀಶ್ ಕದ್ರಿ, ಚೇತನ್ ಕಾಮತ್, ಸೂರಜ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು