8:13 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕ್ರಿಕೆಟ್ ಬೆಟ್ಟಿಂಗ್: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಜೂಜಾಟವಾಡುತ್ತಿದ್ದ ಇಬ್ಬರ ಬಂಧನ

15/10/2023, 22:04

ಮಂಗಳೂರು( reporterkarnataka.com):ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರನ್ನು ಚೇಳ್ಯಾರು ನಿವಾಸಿ ದೀಪಕ್(33) ಹಾಗೂ
ಮರಕಡ ಪಂಜಗುತ್ತು ಮನೆ ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಠದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000 ರೂ‌. ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು