11:08 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕ್ರಿಕೆಟ್ ಬೆಟ್ಟಿಂಗ್: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಜೂಜಾಟವಾಡುತ್ತಿದ್ದ ಇಬ್ಬರ ಬಂಧನ

15/10/2023, 22:04

ಮಂಗಳೂರು( reporterkarnataka.com):ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರನ್ನು ಚೇಳ್ಯಾರು ನಿವಾಸಿ ದೀಪಕ್(33) ಹಾಗೂ
ಮರಕಡ ಪಂಜಗುತ್ತು ಮನೆ ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಠದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿಕೊಂಡು ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000 ರೂ‌. ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿರುತ್ತದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು