8:41 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ; ಹಲವರಿಗೆ ಸಣ್ಣಪುಟ್ಟ ಗಾಯ; 2 ತಾಸು ಸಂಚಾರ ವ್ಯತ್ಯಯ

16/10/2023, 21:29

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 2 ತಾಸು ಸಂಚಾರ ಸ್ಥಗಿತಗೊಂಡಿತು.


ಸೇತುವೆಯ ಮಧ್ಯದಲ್ಲಿ ಲಾರಿಯೊಂದು ಕೆಟ್ಟು ನಿಂತು ಅಪಘಾತದ ಸರಮಾಲೆಗೆ ಕಾರಣವಾಯಿತು. ಸರಣಿ ಅಪಘಾತದಲ್ಲಿ 6 ವಾಹನಗಳಿಗೆ ಹಾನಿಗೀಡಾಗಿವೆ.
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿತ್ತು. ಇದೇ ಸಮಯದಲ್ಲಿ ಭಾರೀ ಮಳೆ ಆರಂಭವಾಗಿತ್ತು. ಇದರ ಪರಿಣಾಮ ನಿಯಂತ್ರಣ ಕಳೆದುಕೊಂಡ ಆಲ್ಟೊ ಕಾರೊಂದು ಲಾರಿ ಹಿಂಬದಿಗೆ ಢಿಕ್ಕಿ ಹೊಡೆಯಿತು. ಬಳಿಕ ಅಪಘಾತದ ಸರಮಾಲೆಯೇ ತೆರೆದುಕೊಂಡಿತು. ಒಂದರ ಹಿಂದೆ ಇನ್ನೊಂದರಂತೆ ರಿಟ್ಸ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2 ತಾಸು ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ವಾಹನಗಳನ್ನು ತೆರವು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು