12:35 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ; ಹಲವರಿಗೆ ಸಣ್ಣಪುಟ್ಟ ಗಾಯ; 2 ತಾಸು ಸಂಚಾರ ವ್ಯತ್ಯಯ

16/10/2023, 21:29

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 2 ತಾಸು ಸಂಚಾರ ಸ್ಥಗಿತಗೊಂಡಿತು.


ಸೇತುವೆಯ ಮಧ್ಯದಲ್ಲಿ ಲಾರಿಯೊಂದು ಕೆಟ್ಟು ನಿಂತು ಅಪಘಾತದ ಸರಮಾಲೆಗೆ ಕಾರಣವಾಯಿತು. ಸರಣಿ ಅಪಘಾತದಲ್ಲಿ 6 ವಾಹನಗಳಿಗೆ ಹಾನಿಗೀಡಾಗಿವೆ.
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿತ್ತು. ಇದೇ ಸಮಯದಲ್ಲಿ ಭಾರೀ ಮಳೆ ಆರಂಭವಾಗಿತ್ತು. ಇದರ ಪರಿಣಾಮ ನಿಯಂತ್ರಣ ಕಳೆದುಕೊಂಡ ಆಲ್ಟೊ ಕಾರೊಂದು ಲಾರಿ ಹಿಂಬದಿಗೆ ಢಿಕ್ಕಿ ಹೊಡೆಯಿತು. ಬಳಿಕ ಅಪಘಾತದ ಸರಮಾಲೆಯೇ ತೆರೆದುಕೊಂಡಿತು. ಒಂದರ ಹಿಂದೆ ಇನ್ನೊಂದರಂತೆ ರಿಟ್ಸ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2 ತಾಸು ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ವಾಹನಗಳನ್ನು ತೆರವು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು