8:21 PM Monday30 - March 2026
ಬ್ರೇಕಿಂಗ್ ನ್ಯೂಸ್
ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ…

ಇತ್ತೀಚಿನ ಸುದ್ದಿ

ತೊಕ್ಕೊಟ್ಟು ಸೇತುವೆಯಲ್ಲಿ ಸರಣಿ ಅಪಘಾತ: 6 ವಾಹನಗಳಿಗೆ ಹಾನಿ; ಹಲವರಿಗೆ ಸಣ್ಣಪುಟ್ಟ ಗಾಯ; 2 ತಾಸು ಸಂಚಾರ ವ್ಯತ್ಯಯ

16/10/2023, 21:29

ಮಂಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಲ್ಲಿ ಸೋಮವಾರ ಸಂಜೆ ಸಂಭವಿಸಿದ ಸರಣಿ ಅಪಘಾತದಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸುಮಾರು 2 ತಾಸು ಸಂಚಾರ ಸ್ಥಗಿತಗೊಂಡಿತು.


ಸೇತುವೆಯ ಮಧ್ಯದಲ್ಲಿ ಲಾರಿಯೊಂದು ಕೆಟ್ಟು ನಿಂತು ಅಪಘಾತದ ಸರಮಾಲೆಗೆ ಕಾರಣವಾಯಿತು. ಸರಣಿ ಅಪಘಾತದಲ್ಲಿ 6 ವಾಹನಗಳಿಗೆ ಹಾನಿಗೀಡಾಗಿವೆ.
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಸೇತುವೆ ಮಧ್ಯಭಾಗದಲ್ಲಿ ಕೆಟ್ಟು ನಿಂತಿತ್ತು. ಇದೇ ಸಮಯದಲ್ಲಿ ಭಾರೀ ಮಳೆ ಆರಂಭವಾಗಿತ್ತು. ಇದರ ಪರಿಣಾಮ ನಿಯಂತ್ರಣ ಕಳೆದುಕೊಂಡ ಆಲ್ಟೊ ಕಾರೊಂದು ಲಾರಿ ಹಿಂಬದಿಗೆ ಢಿಕ್ಕಿ ಹೊಡೆಯಿತು. ಬಳಿಕ ಅಪಘಾತದ ಸರಮಾಲೆಯೇ ತೆರೆದುಕೊಂಡಿತು. ಒಂದರ ಹಿಂದೆ ಇನ್ನೊಂದರಂತೆ ರಿಟ್ಸ್ ಕಾರು, ಕಾಂಟೆಸ್ಸಾ ಕಾರು, ಪಿಕಪ್ ವಾಹನ ಹಾಗೂ ಖಾಸಗಿ ಬಸ್ ಡಿಕ್ಕಿ ಹೊಡೆಯಿತು. ಅಪಘಾತದಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸರಣಿ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2 ತಾಸು ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸುಗಮ ವಾಹನ ಸಂಚಾರಕ್ಕೆ ವಾಹನಗಳನ್ನು ತೆರವು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು