8:23 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಪರಶುರಾಮ ಮೂರ್ತಿಗೆ ಅಪಚಾರ; ಶಾಸಕ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟಿಸಿ: ಸುಭಾಸ್ ಹೆಗ್ಡೆ ಒತ್ತಾಯ

17/10/2023, 10:08

ಕಾರ್ಕಳ(reporterkarnataka.com): ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿರುವ ಸಂದರ್ಭದಲ್ಲಿ ನಕಲಿ ಪರಶುರಾಮರ ಮೂರ್ತಿ ನಿರ್ಮಾಣ ಹಿಂದುತ್ವಕ್ಕೆ ಅಪಚಾರ ಮಾಡಿರುವುದು ಭಯೋತ್ಪಾದನೆಗೆ ಸಮಾನ.
ಹಿಂದುತ್ವಕ್ಕೆ ಅಪಚಾರ ಮಾಡಿದ ಸುನಿಲ್ ಕುಮಾರ್ ಬಿಜೆಪಿಯಿಂದ ಉಚ್ಚಾಟನೆ ಮಾಡಿ ಹಿಂದುತ್ವ ಉಳಿಸಿ ಎಂದು ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಸ್ ಹೆಗ್ಡೆ ಒತ್ತಾಯಿಸಿದ್ದಾರೆ.
ಕಾರ್ಕಳ ಬೈಲೂರುನಲ್ಲಿ ನಿರ್ಮಾಣಗೊಂಡು ಶಾಸಕ ಸುನಿಲ್ ಕುಮಾರ್ ಅವರಿಂದ ಅಪಚಾರಕ್ಕೊಳಗಾದ ಕರಾವಳಿ ಸೃಷ್ಟಿಕರ್ತ ಪರಶುರಾಮರ ಹೊಸ ಮೂರ್ತಿಯನ್ನು ಸರಕಾರ ಶಾಸ್ತ್ರ ಪೂರ್ವಕವಾಗಿ ಮತ್ತೊಮ್ಮೆ ಪ್ರತಿಷ್ಠಾಪನೆ ಮಾಡಿ ಧರ್ಮ ಉಳಿಸಲಿ ಎಂದು ಹೆಗ್ಡೆ ತಿಳಿಸಿದ್ದಾರೆ.
ಪರಶು ರಾಮರು ವಿಷ್ಣುವಿನ ಅವತಾರವೆತ್ತವರು. ಕಾರ್ಕಳದಲ್ಲಿ ಅಂತಹ ಪುಣ್ಯ ಪುರುಷರ ಮೂರ್ತಿ ಕಾರ್ಕಳದಲ್ಲಿ ನಿರ್ಮಾಣ ಕಂಡಾಗ ಹಿಂದೂ ಧರ್ಮದ ಎಲ್ಲರೂ ಸಂತಸ ಪಟ್ಟಿದ್ದರು.
ಎಲ್ಲಾ ಹಿಂದೂ ಸಂಘಟನೆಗಳು ಕೂಡ ಈ ವಿಚಾರ ಬಂದಾಗ ಸಂತಸ ಪಟ್ಟಿದ್ದರು. ಹೆಮ್ಮೆ ಪಟ್ಟಿದ್ದರು. ಆದರೆ ಈ ಮೂರ್ತಿಯನ್ನು ಹಿಂದುತ್ವದ ಹೆಸರಲ್ಲಿ ರಾಜಕೀಯ ಮಾಡಿಕೊಂಡು ಬಂದವರು ನಕಲಿ ಮಾಡುತ್ತಾರೆ ಎಂದು ಕನಸಲ್ಲಿ ಕೂಡ ಎಣಿಸಿರಲಿಲ್ಲ ಎಂದು ಅವರು
ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ವಿಶ್ವ ಗುರು ಆಗುತ್ತಿದೆ. ಇಂತಹ ಸಂತಸದ ದಿನಗಳಲ್ಲಿ ಕರಾವಳಿಯ ಸೃಷ್ಟಿ ಕರ್ತನ ಮೂರ್ತಿಯನ್ನೇ ನಕಲಿ ಮಾಡಿರುವುದು ಹಿಂದುತ್ವಕ್ಕೆ ಮಾಡಿದ ದ್ರೋಹ. ಹಿಂದುತ್ವಕ್ಕೆ ಯಾರೇ ದ್ರೋಹ ಮಾಡಿದರು ಕ್ಷಮೆ ಇಲ್ಲ. ಅದು ಭಯೋತ್ಪಾದನೆಗೆ ಸಮಾನ.
ಈ ದ್ರೋಹದಲ್ಲಿ ಸುನಿಲ್ ಕುಮಾರ್ ಅವರ ನೇರ ಪಾತ್ರ ಇರುವುದರಿಂದ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡುವಂತೆ ಉಚ್ಚಾಟಿತ ಬಿಜೆಪಿ ಮುಖಂಡ ಸುಭಾಶ್ಚಂದ್ರ ಹೆಗ್ಡೆ ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು