8:10 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಏಕರೂಪದ ವೇತನ: ಒಎಂಪಿಎಲ್ ನೌಕರರ ಪ್ರತಿಭಟನೆಗೆ ಶಾಸಕ ಡಾ.ಭರತ್ ಶೆಟ್ಟಿ ಬೆಂಬಲ

17/10/2023, 14:39

ಸುರತ್ಕಲ್(reporter Karnataka.com): ಭೂಮಿ ಕಳೆದುಕೊಂಡ ನೌಕರರಿಗೆ ನ್ಯಾಯಯುತ ವೇತ, ಸೌಲಭ್ಯ ಕೊಡುವುದು ಕಂಪನಿಗಳ ಜವಾಬ್ದಾರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.


ಏಕರೂಪದ ವೇತನ ಜಾರಿಗೊಳಿಸುವಂತೆ ಒತ್ತಾಯಿಸಿ ಎಂಆರ್ ಪಿ ಎಲ್ ಏರೊಮ್ಯಾಟಿಕ್ಸ್ ಕಾಂಪ್ಲೆಕ್ಸ್ ಎಂಪ್ಲಾಯಿಸ್ ಯೂನಿಯನ್ ವತಿಯಿಂದ ನಡೆಯುತ್ತಿರುವ ಎರಡು ದಿನಗಳ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೃಹತ್ ಕಂಪನಿಗಳು ಬಂದರೆ ಸಹಜವಾಗಿ ಉದ್ಯೋಗ ಸಿಗುವ ಆಕಾಂಕ್ಷೆ ಸಹಜವಾಗಿ ಇರುತ್ತದೆ. ಆದರೆ ಸ್ಥಳೀಯರಿಗೆ ಉದ್ಯೋಗದಲ್ಲಾಗಲಿ, ವೇತನದಲ್ಲಾಗಲಿ ತಾರತಮ್ಯ ಮಾಡಬಾರದು. ಎಂಆರ್‍ಪಿಎಲ್ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲು ತಾನು ಶಾಸಕ ಉಮಾನಾಥ ಕೊಟ್ಯಾನ್ ಅವರೊಂದಿಗೆ ಜತೆಯಾಗಲಿದ್ದೇನೆ. ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದರು.
ಈಶ್ವರ್ ಕಟೀಲ್, ಸ್ಥಳೀಯ ಮನಪಾ ಸದಸ್ಯೆ ಸರಿತಾ ಶಶಿಧರ್, ಜಯಂತ್ ತೋಕೂರು,ಯೂನಿಯನ್ ಅಧ್ಯಕ್ಷ ಸುಧೀರ್ ಕುಮಾರ್ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು