5:43 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್ದಾರಿ?

17/10/2023, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ.
ಇದು ನಡೆದದ್ದು ಚಿಕ್ಕಮಗಳೂರು-ಆಲ್ದೂರು ಮಾರ್ಗದ ಲೋಕಲ್ ಬಸ್ಸಿನಲ್ಲಿ.ಸರ್ಕಾರಿ ಬಸ್ಸಿನ ಚಕ್ರಕ್ಕೆ ನಟ್ ಗಳೇ ಇಲ್ಲ. ಇದೊಂದು ಸಾರಿಗೆ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಬಸ್ಸಿನ ಟಯರಿಗೆ 8 ನಟ್ ಇರಬೇಕಾದ ಜಾಗದಲ್ಲಿ 3 ನಟ್ ಮಾತ್ರ ಹಾಕಿ ಬಸ್ ಓಡಿಸಲಾಗಿದೆ.
ಅದೇ ಸ್ಥಿತಿಯಲ್ಲಿ ಬಸ್ಸನ್ನ ಚಾಲಕ ಓಡಿಸಿದ್ದಾರೆ. ನಿತ್ಯ ಶಾಲಾ-ಕಾಲೇಜು ಮಕ್ಕಳು, ವಿವಿಧ ಸಂಸ್ಥೆ ಗಳಲ್ಲಿ ಕೆಲಸ ಮಾಡುವವರು ಇದರಲ್ಲಿ ಪ್ರಯಾಣಿಸುತ್ತಾರೆ. ಮೊದಲೇ ಮಲೆನಾಡು, ಎತ್ತರದ ಬೆಟ್ಟ, ಆಳವಾದ ಕಂದಕದ ನಡುವೆ ಹಾವಿನಂತೆ ಸರಿದಾಡುವ ರಸ್ತೆಗಳು. ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು…?
ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಸರ್ಕಾರಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು