10:41 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಟಯರಿಗೆ ನಟ್ ಹಾಕದೆ ಬಸ್ ಓಡಾಟ: ಇದು ಚಿಕ್ಕಮಗಳೂರು ಡಿಪೋ ಕೆಎಸ್ಸಾರ್ಟಿಸಿ ಸ್ಪೆಷಾಲಿಟಿ; ಸಾರಿಗೆ ಸಚಿವರೇ ಹೆಚ್ಚು ಕಡಿಮೆ ಆದ್ರೆ ಯಾರು ಜವಾಬ್ದಾರಿ?

17/10/2023, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಟಯರಿಗೆ ನಟ್ ಬಿಗಿಯದೇ ಬಸ್ ಓಡಿಸುವುದನ್ನು ನೀವು ಎಲ್ಲದರು ನೋಡಿದ್ದೀರಾ? ನೋಡದಿದ್ದರೆ ಪರವಾಗಿಲ್ಲ, ಈಗ ನೋಡಿ ಬಿಡಿ. ಕೆಎಸ್ಸಾರ್ಟಿಸಿ ಬಸ್ಸನ್ನು ಟಯರಿಗೆ ನೆಟ್ ಹಾಕದೆ ಓಡಿಸಿದ ಘಟನೆ ನಡೆದಿದೆ.
ಇದು ನಡೆದದ್ದು ಚಿಕ್ಕಮಗಳೂರು-ಆಲ್ದೂರು ಮಾರ್ಗದ ಲೋಕಲ್ ಬಸ್ಸಿನಲ್ಲಿ.ಸರ್ಕಾರಿ ಬಸ್ಸಿನ ಚಕ್ರಕ್ಕೆ ನಟ್ ಗಳೇ ಇಲ್ಲ. ಇದೊಂದು ಸಾರಿಗೆ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಯಾಗಿದೆ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.
ಬಸ್ಸಿನ ಟಯರಿಗೆ 8 ನಟ್ ಇರಬೇಕಾದ ಜಾಗದಲ್ಲಿ 3 ನಟ್ ಮಾತ್ರ ಹಾಕಿ ಬಸ್ ಓಡಿಸಲಾಗಿದೆ.
ಅದೇ ಸ್ಥಿತಿಯಲ್ಲಿ ಬಸ್ಸನ್ನ ಚಾಲಕ ಓಡಿಸಿದ್ದಾರೆ. ನಿತ್ಯ ಶಾಲಾ-ಕಾಲೇಜು ಮಕ್ಕಳು, ವಿವಿಧ ಸಂಸ್ಥೆ ಗಳಲ್ಲಿ ಕೆಲಸ ಮಾಡುವವರು ಇದರಲ್ಲಿ ಪ್ರಯಾಣಿಸುತ್ತಾರೆ. ಮೊದಲೇ ಮಲೆನಾಡು, ಎತ್ತರದ ಬೆಟ್ಟ, ಆಳವಾದ ಕಂದಕದ ನಡುವೆ ಹಾವಿನಂತೆ ಸರಿದಾಡುವ ರಸ್ತೆಗಳು. ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು…?
ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು ಡಿಪೋಗೆ ಸೇರಿದ ಸರ್ಕಾರಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು