10:26 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ

18/10/2023, 12:19

ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ಕಾಲೇಜಿನ ಬೆಳ್ಳಿಹಬ್ಬದ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳ್ಳಿಹಬ್ಬ ಆಚರಿಸುತ್ತಿರುವ ಫಾದರ್ ಮುಲ್ಲರ್ ಎಂಬಿಬಿಎಸ್ ಸಂಸ್ಥೆ ಸಾಗಿ ಬಂದ ದಾರಿ ಶ್ಲಾಘನೀಯ. ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ವೈದ್ಯಕೀಯ ಪದವಿ ಪಡೆದಿರುವುದು ಅವಿಸ್ಮರಣೀಯ ಅನುಭವ ನೀಡಿದೆ ಎಂದರು.


ಶಿಕ್ಷಣದ ಜತೆಗೆ ವ್ಯಕ್ತಿತ್ವ ಬೆಳವಣಿಗೆ ಅತ್ಯಗತ್ಯ. ರ‍್ಯಾಂಕ್ ಗಳಿಕೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೇ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೋಷಕರು ಸಹಾಯ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಹಾಗೂ ಮಂಗಳೂರು ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಾಲ್ದಾನಾ ಮಾತನಾಡಿ, ಫಾದರ್ ಮುಲ್ಲರ್ ಸಂಸ್ಥೆ ತನ್ನ ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಜಾಗತಿಕ ಮಟ್ಟದ ಖ್ಯಾತಿ ಗಳಿಸಿದೆ ಎಂದರು.
ತುಂಬೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಆಂಟನಿ ಸಿಲ್ವನ್ ಡಿ ಸೋಜ ಅವರು ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮ ಗಳ ಬಗ್ಗೆ ತಿಳಿಸಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ವಿವಿಧ ವಿಭಾಗದ ಮುಖ್ಯಸ್ಥ ಅಜಿತ್ ಮಿನೇಜಸ್, ವಿನ್ಸೆಂಟ್ ಸಿಲ್ವೇಸ್ಟ್ ರ್ ಲೋಬೊ, ಜೀವನ್ ಸಿಕ್ವೇರ, ಡಾ. ಉದಯ ಕುಮಾರ್, ಡಾ. ಪ್ರಭು ಕಿರಣ್, ಡಾ. ಹೀಲ್ಡಾ, ಜೆಸಿಂತಾ, ಡಾ. ಚರಿಷ್ಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು