9:31 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಫಾದರ್ ಮುಲ್ಲರ್ ಸಂಸ್ಥೆಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿ: ಮಂಗಳೂರು ಬಿಷಪ್ ಪೀಟರ್ ಪೌಲ್ ಸಾಲ್ದಾನಾ

18/10/2023, 12:19

ಮಂಗಳೂರು(reporterkarnataka.com): ಫಾದರ್ ಮುಲ್ಲರ್ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಸೇವಾ ಮನೋಭಾವ ಬೆಳೆಸುವ ಶ್ರೇಷ್ಠ ಸಂಸ್ಥೆಯಾಗಿದೆ ಎಂದು ಪುತ್ತೂರು ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್ ಹೇಳಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಮೂಲಕ ಹಮ್ಮಿಕೊಂಡಿದ್ದ ಫಾದರ್ ಮುಲ್ಲರ್ ಎಂಬಿಬಿಎಸ್ ಪದವಿ ಕಾಲೇಜಿನ ಬೆಳ್ಳಿಹಬ್ಬದ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೆಳ್ಳಿಹಬ್ಬ ಆಚರಿಸುತ್ತಿರುವ ಫಾದರ್ ಮುಲ್ಲರ್ ಎಂಬಿಬಿಎಸ್ ಸಂಸ್ಥೆ ಸಾಗಿ ಬಂದ ದಾರಿ ಶ್ಲಾಘನೀಯ. ಫಾದರ್ ಮುಲ್ಲರ್ ಸೇವಾ ಸಂಸ್ಥೆಯ ವೈದ್ಯಕೀಯ ಪದವಿ ಪಡೆದಿರುವುದು ಅವಿಸ್ಮರಣೀಯ ಅನುಭವ ನೀಡಿದೆ ಎಂದರು.


ಶಿಕ್ಷಣದ ಜತೆಗೆ ವ್ಯಕ್ತಿತ್ವ ಬೆಳವಣಿಗೆ ಅತ್ಯಗತ್ಯ. ರ‍್ಯಾಂಕ್ ಗಳಿಕೆಗೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕದೇ ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೋಷಕರು ಸಹಾಯ ನೀಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ಅಧ್ಯಕ್ಷ ಹಾಗೂ ಮಂಗಳೂರು ಬಿಷಪ್ ಅತೀ ವಂದನೀಯ ಪೀಟರ್ ಪೌಲ್ ಸಾಲ್ದಾನಾ ಮಾತನಾಡಿ, ಫಾದರ್ ಮುಲ್ಲರ್ ಸಂಸ್ಥೆ ತನ್ನ ಗುಣಮಟ್ಟದ ವೈದ್ಯಕೀಯ ಸೇವೆ ಮೂಲಕ ಜಾಗತಿಕ ಮಟ್ಟದ ಖ್ಯಾತಿ ಗಳಿಸಿದೆ ಎಂದರು.
ತುಂಬೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಆಂಟನಿ ಸಿಲ್ವನ್ ಡಿ ಸೋಜ ಅವರು ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮ ಗಳ ಬಗ್ಗೆ ತಿಳಿಸಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಸ್ವಾಗತಿಸಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆ ಗಳ ವಿವಿಧ ವಿಭಾಗದ ಮುಖ್ಯಸ್ಥ ಅಜಿತ್ ಮಿನೇಜಸ್, ವಿನ್ಸೆಂಟ್ ಸಿಲ್ವೇಸ್ಟ್ ರ್ ಲೋಬೊ, ಜೀವನ್ ಸಿಕ್ವೇರ, ಡಾ. ಉದಯ ಕುಮಾರ್, ಡಾ. ಪ್ರಭು ಕಿರಣ್, ಡಾ. ಹೀಲ್ಡಾ, ಜೆಸಿಂತಾ, ಡಾ. ಚರಿಷ್ಮಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು