6:48 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಹಲವು ಜೀವ ಬಲಿಗೆ ಕಾರಣವಾದ ಕೊಟ್ಟಿಗೆಹಾರ ಬಳಿಯ ಅಪಘಾತ ವಲಯದ 2 ತಿರುವುಗಳನ್ನು ನೇರ ಮಾಡುವಂತೆ ಸಾರ್ವಜನಿಕರ ಆಗ್ರಹ

18/10/2023, 15:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಗೆ ಹೋಗುವ ಅಜಾದ್ ನಗರದ ಕೊಗಳತೆಯ ಅಂತರದಲ್ಲಿ ಎರಡು ಅಪಘಾತ ಸಂಭವಿಸುವ ತಿರುವುಗಳಿದ್ದು ಅಲ್ಲಿ ಅನೇಕ ವಾಹನ ಅಪಘಾತಗಳು ನಡೆದಿದ್ದು ಹಲವರು ಗಾಯಗೊಂಡಿದ್ದಾರೆ. ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ಭಾಗದಿಂದ ಕೊಟ್ಟಿಗೆಹಾರಕ್ಕೆ ಬರುವಾಗ ನೇರ ಇಳಿಜಾರು ರಸ್ತೆಯಿದ್ದು ಬರುವ ವಾಹನಗಳು ಹೋಟೆಲ್ ಬಳಿ ತಿರುವಿನಲ್ಲಿ ಮುಗ್ಗರಿಸಿ ಪಲ್ಟಿ ಹೊಡೆಯುತ್ತಿವೆ. ಇದರಿಂದ ಅನೇಕ ಪ್ರವಾಸಿಗರು ಅಪಘಾತಕ್ಕೀಡಾಗಿದ್ದಾರೆ. ಕೊಟ್ಟಿಗೆಹಾರದಿಂದ 50 ಮೀ ಅಂತರದ ಎರಡು ತಿರುವುಗಳು ಜನರ ಪಾಲಿನ ಮೃತ್ಯುಕೂಪಗಳಾಗಿವೆ. ಇತ್ತೀಚೆಗೆ ಗ್ಯಾಸ್ ಲಾರಿ ಹಾಗೂ ಎಳನೀರು ಲಾರಿ ಅಪಘಾತವಾಗಿತ್ತು. ಈ ಹಿಂದೆ ಹಲವು ದ್ವಿಚಕ್ರ ಸವಾರರು, ಹಲವು ಪ್ರವಾಸಿಗರು ಈ ನೇರ ರಸ್ತೆಯಲ್ಲಿ ವೇಗವಾಗಿ ಬಂದು ರಸ್ತೆಯ ಕೊನೆಯಲ್ಲಿ ಹಿಮ್ಮರಿ ತಿರುವು ತರಹ ತಿರುವು ಇರುವುದರಿಂದ ದರ್ಬಾರ್ ಹೋಟೆಲ್ ಬಳಿ ಹಾಗೂ ತರುವೆ ಗ್ರಾಮಕ್ಕೆ ತಿರುಗುವ ರಸ್ತೆ ಬಳಿ ತಿರುವುಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತಿರುವುಗಳನ್ನು ನೇರ ಮಾಡಿ ಅಪಘಾತ ತಪ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ‘ಕೊಟ್ಟಿಗೆಹಾರದ ಬಳಿ ಎರಡು ಅಪಾಯದ ತಿರುವುಗಳಿದ್ದು ಅನೇಕ ಅಪಘಾತ ಸಂಭವಿಸಿವೆ. ಕೊಟ್ಟಿಗೆಹಾರ ತಲುಪುವ ಮುನ್ನವೇ ಜನರು ಪ್ರಾಣಾಪಾಯ ಸಂಭವಿಸುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ತಿರುವುಗಳ ಬಗ್ಗೆ ಸೂಕ್ತ ಗಮನ ಹರಿಸಬೇಕೆಂದು ಕೊಟ್ಟಿಗೆಹಾರ
ಸಮಾಜ ಸೇವಕ ಸಂಜಯ್ ಗೌಡ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು