8:04 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ದೇಶ ಭಕ್ತಿ, ಸಮರ್ಪಣಾ ಮನೋಭಾವ ಸರ್ವರಲ್ಲಿಯೂ ಇರಬೇಕು: ಶಾಸಕ ಡಾ.ಭರತ್ ಶೆಟ್ಟಿ

18/10/2023, 16:16

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದೇಶದ ಮೇಲೆ ಪ್ರೀತಿ, ಸಮರ್ಪಣಾ ಮನೋಭಾವ ದೇಶದ ಪ್ರತೀ ಪ್ರಜೆಯಲ್ಲಿಯೂ ಇದ್ದಾಗ ಎಂತಹ ಸಂಕಷ್ಟ ಬಂದರೂ ಎದುರಿಸಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ವೀರ ಸ್ಮರಣೆಗಾಗಿ ಹಮ್ಮಿಕೊಂಡಿರುವ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮ ಐತಿಹಾಸಿಕ ನಡೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.




ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕನ್ನಡ ಸಂಸ್ಕøತಿ ಇಲಾಖೆ, ಅಂಚೆ ಇಲಾಖೆ,ಲೀಡ್ ಬ್ಯಾಂಕ್, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಹಾಗೂ ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಮೇರಿ ಮಾಟಿ ಮೇರಾ ದೇಶ್ ನನ್ನ ಮಣ್ಣು ನನ್ನ ದೇಶ ಕಾರ್ಯಕ್ರಮದ ಅಂಗವಾಗಿ ಅಮೃತ ಕಲಶ ಯಾತ್ರೆ ಯ ಸಮಾರೋಪ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾತೃಭೂಮಿ ಎಂದು ಬಂದಾಗ ನಾವೆಲ್ಲಾ ಸಮರ್ಪಣಾ ಮನೋಭಾವ ಹೊಂದ ಬೇಕು.ದೇಶದ ವೀರ ಸ್ವಾತಂತ್ರ್ಯ ಹೋರಾಟಗಾರರು, ನಮ್ಮನ್ನು ಕಾಪಾಡುವಲ್ಲಿ ಬಲಿದಾನವನ್ನು ಮಾಡಿದ ವೀರ ಯೋಧರ ಸ್ಮರಣೆಯಲ್ಲಿ ರಾಜಧಾನಿಯಲ್ಲಿ ಉದ್ಯಾನವನ ನಿರ್ಮಾಣ ಆ ಮೂಲಕ ನಮ್ಮ ಮುಂದಿನ ಪೀಳಿಗೆಯಲ್ಲಿ ಸದಾ ಜಾಗೃತಿ ಮನಸ್ಥಿತಿಯನ್ನು ಮೂಡಿಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ,ನೆಹರು ಯುವ ಕೇಂದ್ರದ ಜಗದೀಶ್, ಅಂಚೆ ಇಲಾಖೆಯ ಅಧಿಕಾರಿಗಳಾದ ಶಂಕರ್, ಆಡಳಿತಾಧಿಕಾರಿ ತಾಲೂಕು ಪಂಚಾಯತ್ ರವಿಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಪ್ರಮುಖರಾದ ನಾಗರತ್ನ, ಉದಯ್ ಕುಮಾರ್. ತಾಲೂಕು ಪಂಚಾಯತ್ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು