8:10 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾಲುವೆಯ ಕೆನಲ್ ಬಿರುಕು ಬಿಟ್ಟು ಕೊಚ್ಚಿ ಹೋದ ಹೊಲದ ಮಣ್ಣು; ಒಂದೂವರೆ ವರ್ಷದ ಹಳೆ ಸಮಸ್ಯೆಗೆ ಕೊನೆಗೂ ಪರಿಹಾರ

30/07/2021, 08:02

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು 

info.reporterkarnataka@gmail.com

ಜಿಲ್ಲೆಯ ದೇವದುರ್ಗ ತಾಲೂಕಿನ ಬೇವಿನಬೆಂಚಿ ಗ್ರಾಮದ ಹನುಮಂತ ಎಂಬವರ ಹೊಲದ ಸಮೀಪವಿರುವ ನಾರಾಯಣಪುರ ಬಲದಂಡೆಯ ಕಾಲುವೆಯ ಕಳಪೆ ಕಾಮಗಾರಿಯಿಂದ ಕೆನಲ್ ಒಡೆದು ಹೋದ ಪರಿಣಾಮ ಮಣ್ಣು ಕೊಚ್ಚಿ ಹೋಗಿ ಬೆಳೆಗೆ ತೊಂದರೆ ಉಂಟಾಗಿದ್ದು, ಸುಮಾರು ಒಂದೂವರೆ ವರ್ಷ ಹಳೆಯದಾದ ಈ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕಿದೆ.

ಹನುಮಂತ ಅವರಿಗೆ 3.02 ಎಕರೆ ಜಮೀನು ಇದ್ದು, ಆವರ ಹೊಲದ ಪಕ್ಕದಲ್ಲೇ ನಾರಾಯಣಪುರ ಬಲದಂಡೆ ಕಾಲುವೆಯ ವಿತರಣೆ ಕಾಲುವೆ ಹಾದು ಹೋಗುತ್ತದೆ ಇದರ ಕಳಪೆ ಕಾಮಗಾರಿಯಿಂದಾಗಿ ಸಂಕಷ್ಟ ಎದುರಾಗಿತ್ತು.

ಮಣ್ಣು ಕೊಚ್ಚಿ ಹೋಗಿರುವುದರಿಂದ ಹೊಲ ಬಿತ್ತನೆಗೆ ಬಾರದೆ ಸ್ಥಿತಿಯಲ್ಲಿತ್ತು. ಹನುಮಂತ ಅವರು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮೊರೆ ಹೋಗಿ ತನ್ನ. ದುಸ್ಥಿತಿಯನ್ನು ಹೇಳಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಈ ಹಿನ್ನೆಲೆಯಲ್ಲಿ ಹನುಮಂತ ಅವರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮೊರೆ ಹೋಗಿದ್ದರು. ಸಂಘಟನೆ ತನ್ನ ಲೆಟರ್ ಹೆಡ್ ಮೂಲಕ ಮನವಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು

ಯಾವುದೇ ರೀತಿಯ ಸ್ಪಂದನೆ ಕೊಡದೆ ಬೇಜವಾಬ್ದಾರಿತನ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ರೈತ ಸಂಘದ

ರಾಜ್ಯದ ಗೌರವಾಧ್ಯಕ್ಷ ಶಶಿಕಾಂತ್ ಪಡಸಲಗಿ ಮತ್ತು ಇಂಚಿಗೇರಿ ಮಠದ ಗುರುಗಳು ರಾಯಚೂರಿಗೆ ಆಗಮಿಸಿ ಸುಮಾರು ಒಂದೂವರೆ ವರ್ಷ ಕಳೆದರೂ ಕಾರ್ಯರೂಪಕ್ಕೆ ಬಾರದೇ ಕಾಮಗಾರಿಯನ್ನು 


ದೇವದುರ್ಗ ಪಿಡಬ್ಲ್ಯೂಡಿ ಮೂಲಕ ನೆರವೇರಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಟ್ಟರು. ಅಲ್ಲಿನ ನೀರಾವರಿ ಅಧಿಕಾರಿಗಳಿಗೆ ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡದೆ ಇದ್ದರೆ ಇನ್ನು ಮುಂದೆ ನಿಮಗೆ ಉಳಿಗಾಲವಿಲ್ಲವೆಂದು ಎಚ್ಚರಿಸಿದರು. ತಕ್ಷಣ ಸ್ಪಂದಿಸಿದ ಅಧಿಕಾರಿಗಳು ತಪ್ಪಾಗಿದೆ ಗುರುಗಳೆ ಇನ್ನು ಮುಂದೆ ಕಾರ್ಯನಿರ್ವಹಣೆಯಲ್ಲಿ ಪ್ರಾಮಾಣಿಕತೆಯನ್ನು ಮರೆಯುತ್ತೇವೆ ಎಂದು ಒಪ್ಪಿಕೊಂಡು 15 ದಿವಸದೊಳಗೆ ಕೆಲಸವನ್ನು ಮುಗಿಸಿಕೊಳ್ಳಲು ತೀರ್ಮಾನಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು