1:44 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಾಲುವೆಯ ಕೆನಲ್ ಬಿರುಕು ಬಿಟ್ಟು ಕೊಚ್ಚಿ ಹೋದ ಹೊಲದ ಮಣ್ಣು; ಒಂದೂವರೆ ವರ್ಷದ ಹಳೆ ಸಮಸ್ಯೆಗೆ ಕೊನೆಗೂ ಪರಿಹಾರ

30/07/2021, 08:02

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು 

info.reporterkarnataka@gmail.com

ಜಿಲ್ಲೆಯ ದೇವದುರ್ಗ ತಾಲೂಕಿನ ಬೇವಿನಬೆಂಚಿ ಗ್ರಾಮದ ಹನುಮಂತ ಎಂಬವರ ಹೊಲದ ಸಮೀಪವಿರುವ ನಾರಾಯಣಪುರ ಬಲದಂಡೆಯ ಕಾಲುವೆಯ ಕಳಪೆ ಕಾಮಗಾರಿಯಿಂದ ಕೆನಲ್ ಒಡೆದು ಹೋದ ಪರಿಣಾಮ ಮಣ್ಣು ಕೊಚ್ಚಿ ಹೋಗಿ ಬೆಳೆಗೆ ತೊಂದರೆ ಉಂಟಾಗಿದ್ದು, ಸುಮಾರು ಒಂದೂವರೆ ವರ್ಷ ಹಳೆಯದಾದ ಈ ಸಮಸ್ಯೆಗೆ ಕೊನೆಗೂ ಪರಿಹಾರ ದೊರಕಿದೆ.

ಹನುಮಂತ ಅವರಿಗೆ 3.02 ಎಕರೆ ಜಮೀನು ಇದ್ದು, ಆವರ ಹೊಲದ ಪಕ್ಕದಲ್ಲೇ ನಾರಾಯಣಪುರ ಬಲದಂಡೆ ಕಾಲುವೆಯ ವಿತರಣೆ ಕಾಲುವೆ ಹಾದು ಹೋಗುತ್ತದೆ ಇದರ ಕಳಪೆ ಕಾಮಗಾರಿಯಿಂದಾಗಿ ಸಂಕಷ್ಟ ಎದುರಾಗಿತ್ತು.

ಮಣ್ಣು ಕೊಚ್ಚಿ ಹೋಗಿರುವುದರಿಂದ ಹೊಲ ಬಿತ್ತನೆಗೆ ಬಾರದೆ ಸ್ಥಿತಿಯಲ್ಲಿತ್ತು. ಹನುಮಂತ ಅವರು ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮೊರೆ ಹೋಗಿ ತನ್ನ. ದುಸ್ಥಿತಿಯನ್ನು ಹೇಳಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಈ ಹಿನ್ನೆಲೆಯಲ್ಲಿ ಹನುಮಂತ ಅವರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮೊರೆ ಹೋಗಿದ್ದರು. ಸಂಘಟನೆ ತನ್ನ ಲೆಟರ್ ಹೆಡ್ ಮೂಲಕ ಮನವಿ ಸಲ್ಲಿಸಿತ್ತು. ಆದರೆ ಅಧಿಕಾರಿಗಳು

ಯಾವುದೇ ರೀತಿಯ ಸ್ಪಂದನೆ ಕೊಡದೆ ಬೇಜವಾಬ್ದಾರಿತನ ತೋರಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ರೈತ ಸಂಘದ

ರಾಜ್ಯದ ಗೌರವಾಧ್ಯಕ್ಷ ಶಶಿಕಾಂತ್ ಪಡಸಲಗಿ ಮತ್ತು ಇಂಚಿಗೇರಿ ಮಠದ ಗುರುಗಳು ರಾಯಚೂರಿಗೆ ಆಗಮಿಸಿ ಸುಮಾರು ಒಂದೂವರೆ ವರ್ಷ ಕಳೆದರೂ ಕಾರ್ಯರೂಪಕ್ಕೆ ಬಾರದೇ ಕಾಮಗಾರಿಯನ್ನು 


ದೇವದುರ್ಗ ಪಿಡಬ್ಲ್ಯೂಡಿ ಮೂಲಕ ನೆರವೇರಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಟ್ಟರು. ಅಲ್ಲಿನ ನೀರಾವರಿ ಅಧಿಕಾರಿಗಳಿಗೆ ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡದೆ ಇದ್ದರೆ ಇನ್ನು ಮುಂದೆ ನಿಮಗೆ ಉಳಿಗಾಲವಿಲ್ಲವೆಂದು ಎಚ್ಚರಿಸಿದರು. ತಕ್ಷಣ ಸ್ಪಂದಿಸಿದ ಅಧಿಕಾರಿಗಳು ತಪ್ಪಾಗಿದೆ ಗುರುಗಳೆ ಇನ್ನು ಮುಂದೆ ಕಾರ್ಯನಿರ್ವಹಣೆಯಲ್ಲಿ ಪ್ರಾಮಾಣಿಕತೆಯನ್ನು ಮರೆಯುತ್ತೇವೆ ಎಂದು ಒಪ್ಪಿಕೊಂಡು 15 ದಿವಸದೊಳಗೆ ಕೆಲಸವನ್ನು ಮುಗಿಸಿಕೊಳ್ಳಲು ತೀರ್ಮಾನಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು