8:09 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಕಮಲೇಶ್ ಬಲದೇವ್ ಪೊಲೀಸರಿಗೆ ಶರಣು: ತಂದೆಯ ಜತೆ ಠಾಣೆಗೆ ಬಂದ ಆರೋಪಿ

18/10/2023, 23:08

ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದ್ದು, ಈತನನ್ನು ಕಮಲೇಶ್ ಬಲದೇವ್ ಎಂದು ಗುರುತಿಸಲಾಗಿದೆ.


ಅಜಾಗರೂಕತೆ ಹಾಗೂ ನಿರ್ಲಕ್ಷ್ಯ ದಿಂದ ಕಾರು ಚಾಲನೆ ಮಾಡಿದ ಕಮಲೇಶ್ ಬಲದೇವ್ ಕುದ್ರೋಳಿ ದೇಗುಲಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ಯುವತಿ ಹಾಗೂ ಮಕ್ಕಳಿದ್ದ ಗುಂಪಿಗೆ ಕಾರು ನುಗ್ಗಿಸಿದ್ದ. ಇದರ ಪರಿಣಾಮ ಸುರತ್ಕಲ್ ಸಮೀಪದ ಕಾನ ಬಾಳದ ನಿವಾಸಿ ಗಂಗಾಧರ ಅವರ ಪುತ್ರಿ 23ರ ಹರೆಯದ ರೂಪಶ್ರೀ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಅಪ್ರಾಪ್ತ ಬಾಲಕಿಯರು ಸೇರಿದಂತೆ ಇನ್ನೊರ್ವ ಯುವತಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದ ಕಮಲೇಶ್ ಬಲದೇವ್ ಹೊಂಡಾ ಶೋ ರೂಮ್ ಬಳಿ ಕಾರನ್ನು ನಿಲ್ಲಿಸಿ ಮನೆಗೆ ತೆರಳಿದ್ದ. ಮನೆಯಲ್ಲಿ ವಿಷಯವೆಲ್ಲ ಹೇಳಿದ ಬಳಿಕ ತಂದೆ ಎಚ್.ಎಂ. ಬಲದೇವ್ ಜತೆ ಬಂದು ಪಶ್ಚಿಮ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು