5:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಳೆ ಇಲ್ಲದೆ, ಕರೆಂಟ್ ಇಲ್ಲದೆ ರೈತರು ಉದ್ಯೋಗ ಅರಸಿ ಗುಳೆ ಹೊರಟ್ಟಿದ್ದಾರೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಆಕ್ರೋಶ

18/10/2023, 23:39

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.ಕಂ

ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಇದರ ಪರಿಣಾಮ ಕಷ್ಟ ಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ.
ಹೀಗಾಗಿ ಕಾಗವಾಡ ಕ್ಷೇತ್ರದ ರೈತರು ಆತ್ಮಹತ್ಯೆ ಮಾಡಿಕೊಂಡರು ಕೂಡ ಆಶ್ಚರ್ಯ ಪಡಬೇಕಿಲ್ಲ ಎಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.
ಅವರು ಅಥಣಿ ಶುಗರ್ಸ ಆವರಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಕಾಗವಾಡ ಕ್ಷೇತ್ರದ ರೈತರು ಸರಕಾರದ ನಡೆಗೆ ಬೇಸತ್ತು ಉದ್ಯೋಗ ಅರಸಿ ಗುಳೆ ಹೊರಟಿದ್ದು, ಈ ಸಂಕಷ್ಟ ಸ್ಥಿತಿಯಿಂದ ಹೊರ ಬರಲು ಕನಿಷ್ಠ 7 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಅವರು ಆಗ್ರಹಿಸಿದರು.ಬರಗಾಲದ ಈ ಸ್ಥಿತಿಗೆ ಬೇಸತ್ತು ಕಾಗವಾಡ ಮತಕ್ಷೇತ್ರದ ಸಂಬರಗಿ ಗ್ರಾಮದ ರೈತನೋರ್ವ ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಇದೇ ರೀತಿ ಮುಂದುವರೆದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದು ನಿಶ್ಚಿತ.
ಕಾಗವಾಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನ ಅಧಿಕಾರವಧಿತಲ್ಲಿ ಅನುಷ್ಠಾನಗೊಂಡ ಕೇಂದ್ರದ ಜಲಜೀವನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ನೂರಾರು ಜನಪರ ಮತ್ತು ಅಭಿವೃದ್ಧಿ ಪರ ಯೋಜನೆಗಳು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸ್ಥಗಿತಗೊಂಡ ಪರಿಣಾಮ ಕಾಗವಾಡ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ಸರಕಾರದ ಅವಧಿಯಲ್ಲಿ ಅಂತಿಮ ಹಂತ ತಲುಪಿದ್ದ ಖಿಳೇಗಾಂವ ಬಸವೇಶ್ವರ ಯೋಜನೆಯ ಕಾರ್ಯ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇದರಿಂದ ಕಾಗವಾಡ ಕ್ಷೇತ್ರದ 70 ಸಾವಿರ ಎಕರೆ ಭೂಮಿ ನೀರಾವರಿ ಯಿಂದ ವಂಚಿತಗೊಂಡಿದೆ ಎಂದರು.
ಬಿಜೆಪಿ ಮುಖಂಡರಾದ ಮಹಾದೇವ ಕೋರೆ, ತಮ್ಮಣ್ಣ ಪಾರಶೆಟ್ಟಿ, ಈಶ್ವರ ಕುಂಬಾರೆ, ಅಪ್ಪಣ್ಣಾ ಮಗದುಮ್, ರಾಕೇಶ ಪಾಟೀಲ, ರಾಜು ಚವ್ಹಾಣ, ಶಿವಾನಂದ ಮೆಣಸಿ, ವಿಠ್ಠಲ ಮಾಳಿ, ಉತ್ಕರ್ಷ ಪಾಟೀಲ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು