8:15 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ

ಇತ್ತೀಚಿನ ಸುದ್ದಿ

ಇಂದ್ರಾಳಿ ರೈಲ್ವೆ ಮೇಲು ಸೇತುವೆ ರಸ್ತೆ ಆಭಿವೃಧ್ದಿ ಕಾಮಗಾರಿ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

19/10/2023, 12:37

ಉಡುಪಿ (reporterkarnataka.com): ಪ್ರತಿಯೊಬ್ಬ ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದಲ್ಲಿ ರಸ್ತೆ ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜಿಲ್ಲೆಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ರಸ್ತೆ ಸುಧಾರಣಾ ಮೂಲಭೂತ ಕಾಮಗಾರಿಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟು ಅಪಘಾತ ಪ್ರಮಾಣವನ್ನು ಅತ್ಯಂತ ಕಡಿಮೆಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ೩೦ ಕ್ಕೂ ಹೆಚ್ಚು ಅಪಘಾತ ವಲಯ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ರಾಷ್ಟಿçÃಯ ಹೆದ್ದಾರಿ, ರಾಜ್ಯ ಹೆದ್ದಾರಿಗೆ ಸಂಬಂದಿಸಿದ ಅಧಿಕಾರಿಗಳು ತತ್‌ಕ್ಷಣದಲ್ಲಿಯೇ ಸುರಕ್ಷಿತಾ ಸೌಕರ್ಯಗಳ ಕಾರ್ಯಗಳನ್ನು ವೈಜ್ಞಾನಿಕವಾಗಿ ಕೈಗೊಂಡು ಅಪಘಾತಗಳನ್ನು ತಪ್ಪಿಸಲು ಮುಂದಾಗಬೇಕು ಎಂದರು.
ಇಂದ್ರಾಳಿ ರೈಲ್ವೆ ಮೇಲು ಸೇತುವೆ ಮೇಲಿನ ರಸ್ತೆ ಆಭಿವೃಧ್ದಿ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ರೈಲ್ವೇ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಇಂದ್ರಾಳಿಯ ರೈಲ್ವೆ ಮೇಲ್ಸೇತುವೆಯ ಎರಡೂ ಭಾಗದ ೧೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ಬಸ್‌ಗಳು ನಿಲ್ಲಿಸದಂತೆ ಕ್ರಮ ವಹಿಸಬೇಕು. ಬಸ್‌ಗಳ ನಿಲುಗಡೆಯಿಂದ ವಾಹನ ಸುಗಮ ಸಂಚಾರಕ್ಕೆ ತೊಂದರೆಯಾಗುವುದರ ಜೊತೆಗೆ ರಸ್ತೆ ಅಪಘಾತಗಳು ಆಗುವ ಸಾಧ್ಯತೆಗಳಿವೆ ಎಂದರು.

ರಸ್ತೆಯ ಬದಿಯ ಖಾಲಿ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡಲು ಮಾರ್ಗಸೂಚಿಗಳನ್ನು ರಚಿಸಿ, ಗಿಡ ಮರಗಳನ್ನು ನೆಡಬೇಕು ಎಂದ ಅವರು, ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿ ಮರ ಹಾಗೂ ಮರದ ರೆಂಬೆಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪ್ರಾದೇಶಿಕ ಸಾರಿಗೆ ಅಧಿಕಾರಿ ರವಿಶಂಕರ್, ಪೌರಾಯುಕ್ತ ರಾಯಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಕ ಇಂಜಿನಿಯರ್ ದಿನೇಶ್ ಕೆ.ಎನ್, ರಾಷ್ಟ್ರೀಯ ಹೆದ್ದಾರಿ ಅಭಿಯಂತರ ಮಂಜುನಾಥ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು