2:25 PM Tuesday23 - September 2025
ಬ್ರೇಕಿಂಗ್ ನ್ಯೂಸ್
ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು

ಇತ್ತೀಚಿನ ಸುದ್ದಿ

ರಾಜ್ಯ ಸರಕಾರ ಬೀಳಿಸೋ ತಾಕತ್ತು ಹೊರಗಡೆ ಯಾರಿಗೂ ಇಲ್ಲ; ಅವರಾಗಿಯೇ ಬೀಳಬೇಕು: ಬಿಜೆಪಿ ನಾಯಕ ಸಿ.ಟಿ. ರವಿ

20/10/2023, 13:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ 135 ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ. ಅವರೆಲ್ಲ ಒಗ್ಗಟ್ಟಿದ್ರೆ ಯಾರಿಗೂ ಬೀಳಿಸಲು ಆಗುತ್ತಾ? ಸಚಿವ
ಸತೀಶ್ ಜಾರಕಿಹೊಳಿಗೆ ನಾವೇನಾದರು ಹೇಳಿಕೊಟ್ಟಿದ್ದೀವಾ….? ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಗೆ ಬಂದಾಗ ಹೋಗಬೇಡಿ ಅಂತ ನಾವು ಹೇಳಿಕೊಟ್ಟಿದ್ದೀವಾ…? ಅದು ಅವರು ತೆಗೆದುಕೊಂಡಿರುವ ತೀರ್ಮಾನ. 20 ಹಿರಿಯ ಶಾಸಕರು ಪತ್ರ ಬರೆದಿದ್ದರು, ನಾವೇನಾದ್ರು ಬರೀರಿ ಅಂತ ಬರ್ಸಿದ್ವಾ…? ಬಿಜೆಪಿಯವ್ರು ಬರ್ಸಿದ್ರೆ ಇವೆಲ್ಲಾ ಬಿಜೆಪಿಯವರು ಮಾಡ್ತಿದ್ದಾರೆ ಅನ್ನಬಹುದು ಎಂದು ರವಿ ನುಡಿದರು.

ರಾಜಣ್ಣ ಅವರ ಬಳಿ ಐವರು ಡಿಸಿಎಂ ಮಾಡಿ ಅಂತ ನಾವು ಹೇಳಿಸಿದಲ್ಲ. 135 ಜನ ಒಟ್ಟಿಗೆ ಇದ್ರೆ ಯಾರು ಅಲ್ಲಾಡಿಸಲು ಅಗುವುದಿಲ್ಲ.ಅವ್ರು ಅಲ್ಲಾಡ್ತಾ ಇದ್ರೆ ಅದು ನಮ್ಮ ಕೈಯಲ್ಲಿ ಇಲ್ಲ. ಅಲ್ಲಾಡ್ತಾ ಇದ್ರೆ ಇವತ್ತಲ್ಲ ನಾಳೆ ಬಿದ್ದೇ ಬಿಳುತ್ತೇ ನಮ್ಮ ಕೈಯಲ್ಲಿದ್ದೀಯಾ ಎಂದರು.
ಜನ ಒಳ್ಳೆಯ ಅಡಳಿತ ಕೊಡಿ ಅಂತ ಅಧಿಕಾರ ಕೊಟ್ಟಿದ್ದಾರೆ.
ಕಲಾವಿದರ ಬಳಿಯೂ ದುಡ್ಡು ಎತ್ಕೊಂಡು ತಿನ್ನಿ ಅಂತ ಅಧಿಕಾರ ಕೊಟ್ಟಿದ್ದಾರಾ?ಎಲ್ಲದರಲ್ಲೂ ಹೆದರಿಸಿ-ಬೆದರಿಸಿ ವಸೂಲಿ ಮಾಡಿ ಅಂತ ಅಧಿಕಾರ ಕೊಟ್ಟಿರೋದಾ?ನಾವು ಹೆಚ್ಚು ಅಂದ್ರೆ ಇವ್ರ ಮೇಲೆ ಆರೋಪ ಮಾಡಬಹುದು. ಸರ್ಕಾರದ ಬಗ್ಗೆ ಜನ ಶಾಪ ಹಾಕಬಹುದು, ಅದಕ್ಕಿಂತ ಇನ್ನೇನೂ ಮಾಡೋಕಾಗುತ್ತೇ ಎಂದು ಸಿ. ಟಿ. ರವಿ ಪ್ರಶ್ನಿಸಿದರು.
ಸರ್ಕಾರವನ್ನ ಬಿಳಿಸುವ ತಾಕತ್ತು ಹೊರಗಡೆಯ ಯಾರಿಗೂ ಇಲ್ಲ.
ಬೀಳಿಸುವ ಸಾಮಾರ್ಥ್ಯ ಇರೋದು ಒಳಗಡೆ ಇರುವ ಕಾಂಗ್ರೆಸ್ಸಿಗರಿಗೆ ಮಾತ್ರ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು