2:15 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ತುಷಾರ್ ಹೆಗ್ಡೆ ವೇಣೂರು ನಿರ್ದೇಶನದ ತುಳು ವೆಬ್ ಸೀರೀಸ್ ‘ಕಸರತ್ತ್’ ಮೊದಲ ಪೋಸ್ಟರ್ ಬಿಡುಗಡೆ

20/10/2023, 22:12

ಮಂಗಳೂರು(reporterkarnataka.com): ತುಷಾರ್ ಹೆಗ್ಡೆ ವೇಣೂರು ನಿರ್ದೇಶನದ ಮೊದಲ ಪ್ರಯತ್ನ ತುಳು ವೆಬ್ ಸೀರೀಸ್ ‘ಕಸರತ್ತ್’ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ.
ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಜೀ ಕನ್ನಡ ಕಾಮಿಡಿ ಖಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ, ಸೂರಜ್ ಕುಮಾರ್, ರಾಕೇಶ್ ಪೂಜಾರಿ ಮುಖ್ಯ ಭೂಮಿಕೆಯ ಈ ಸೀರೀಸ್ ನಲ್ಲಿ ನವ್ಯಾ ಪೂಜಾರಿ ನಾಯಕಿಯಾಗಿ ನಟಿಸಿದ್ದಾರೆ . ಮೊದಲ ಬಾರಿಗೆ ಜೀ ಕನ್ನಡ ಕಾಮಿಡಿ ಖಿಲಾಡಿ ಅನೀಶ್ ಅಮೀನ್ ವೇಣೂರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ ಜೊತೆ ಗೆ ಮುಖ್ಯ ಪಾತ್ರಗಳಲ್ಲಿ ಜೀ ಕನ್ನಡ ಕಾಮಿಡಿ ಖಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಧೀರಜ್ ನೀರುಮಾರ್ಗ, ರಾಧೇಶ್ ಶೆಣೈ, ದಿವ್ಯ ಅಂಚನ್ ವೇಣೂರು ನಟಿಸಿದ್ದಾರೆ.
ಜೊತೆಗೆ ಚಂದ್ರಶೇಖರ್ ಹೊಕ್ಕಡಿಗೋಳಿ, ಮನೀಶ್ ಶೆಟ್ಟಿ, ಸುಕೇಶ್ ವೇಣೂರು, ದೀಕ್ಷಿತ್ ಅಂಡಿಂಜೆ, ನಿಶಿತ್ ಶೆಟ್ಟಿ ಮುಂತಾದ ಕಲಾವಿದರು ನಟಿಸಿದ್ದಾರೆ.
ಬೋಧಿ ಪ್ರೊಡಕ್ಷನ್ ಪ್ರಸ್ತುತ ಪಡಿಸುವ, ಟಾಕೀಸ್ ಆಪ್ ನಿರ್ಮಿಸಿದ, ಗಣೇಶ್ ಎಂ ಉಜಿರೆ, ರಿತೇಶ್ ಗೌಡ ವೇಣೂರು,ನೆಲ್ವಿಸ್ಟರ್ ಗ್ಲಾನ್ ಪಿಂಟೋ ಸಹಕಾರದ ಚಿತ್ರಕ್ಕೆ ಮಾನಸ ಹೊಳ್ಳ ಅವರ ಸಂಗೀತ, ಸಂತೋಷ್ ಗುಂಪಾಲಜೆ ಅವರ ಛಾಯಾಗ್ರಾಹಣ, ಗಣೇಶ್ ನಿರ್ಚಲ್ ಅವರ ಸಂಕಲನ, ಸುಕೇಶ್ ಶೆಟ್ಟಿ ಅವರ ಸಾಹಿತ್ಯ, ಕಾಮಿಡಿ ಕಿಲಾಡಿ ಸೂರಜ್ ಕುಮಾರ್ ಅವರ ನೃತ್ಯ ನಿರ್ದೇಶನ, ಅವಿನಾಶ್ ನಾತು ಮತ್ತು ಪ್ರಣೀತ್ ಜೈನ್ ಅವರ ಕಲೆ ಈ ಚಿತ್ರಕ್ಕಿದೆ. ಸ್ಮಿತೇಶ್ ಎಸ್ ಬಾರ್ಯ ಮತ್ತು ಅನೀಶ್ ಅಮೀನ್ ವೇಣೂರು ತಾಂತ್ರಿಕ ಮೇಲ್ವಿಚಾರಣೆಯ ಚಿತ್ರಕ್ಕೆ ದೀಕ್ಷಿತ್ ಕೆ ಅಂಡಿಂಜೆ ನಿರ್ಮಾಣ ನಿರ್ವಹಣೆ ಇದೆ. ವಿನಯ್ ಕುಮಾರ್ ಉಜಿರೆ, ನಿರಾಜ್ ಕುಂಜಾರ್ಪ, ದೀಕ್ಷಿತ್ ಭಂಡಾರಿ, ನಿಶಿತ್ ಶೆಟ್ಟಿ ನಿರ್ದೇಶನ ತಂಡದಲ್ಲಿ ಸಹಕರಿಸಿದ್ದಾರೆ.
ಈ ಸೀರೀಸ್ ಆದಷ್ಟು ಶೀಘ್ರದಲ್ಲಿ ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು