9:06 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ತುಷಾರ್ ಹೆಗ್ಡೆ ವೇಣೂರು ನಿರ್ದೇಶನದ ತುಳು ವೆಬ್ ಸೀರೀಸ್ ‘ಕಸರತ್ತ್’ ಮೊದಲ ಪೋಸ್ಟರ್ ಬಿಡುಗಡೆ

20/10/2023, 22:12

ಮಂಗಳೂರು(reporterkarnataka.com): ತುಷಾರ್ ಹೆಗ್ಡೆ ವೇಣೂರು ನಿರ್ದೇಶನದ ಮೊದಲ ಪ್ರಯತ್ನ ತುಳು ವೆಬ್ ಸೀರೀಸ್ ‘ಕಸರತ್ತ್’ ಮೊದಲ ಪೋಸ್ಟರ್ ಬಿಡುಗಡೆಗೊಂಡಿದೆ.
ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಜೀ ಕನ್ನಡ ಕಾಮಿಡಿ ಖಿಲಾಡಿಗಳು ಖ್ಯಾತಿಯ ಹಿತೇಶ್ ಕಾಪಿನಡ್ಕ, ಸೂರಜ್ ಕುಮಾರ್, ರಾಕೇಶ್ ಪೂಜಾರಿ ಮುಖ್ಯ ಭೂಮಿಕೆಯ ಈ ಸೀರೀಸ್ ನಲ್ಲಿ ನವ್ಯಾ ಪೂಜಾರಿ ನಾಯಕಿಯಾಗಿ ನಟಿಸಿದ್ದಾರೆ . ಮೊದಲ ಬಾರಿಗೆ ಜೀ ಕನ್ನಡ ಕಾಮಿಡಿ ಖಿಲಾಡಿ ಅನೀಶ್ ಅಮೀನ್ ವೇಣೂರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ ಜೊತೆ ಗೆ ಮುಖ್ಯ ಪಾತ್ರಗಳಲ್ಲಿ ಜೀ ಕನ್ನಡ ಕಾಮಿಡಿ ಖಿಲಾಡಿ ಖ್ಯಾತಿಯ ಪ್ರವೀಣ್ ಜೈನ್, ಧೀರಜ್ ನೀರುಮಾರ್ಗ, ರಾಧೇಶ್ ಶೆಣೈ, ದಿವ್ಯ ಅಂಚನ್ ವೇಣೂರು ನಟಿಸಿದ್ದಾರೆ.
ಜೊತೆಗೆ ಚಂದ್ರಶೇಖರ್ ಹೊಕ್ಕಡಿಗೋಳಿ, ಮನೀಶ್ ಶೆಟ್ಟಿ, ಸುಕೇಶ್ ವೇಣೂರು, ದೀಕ್ಷಿತ್ ಅಂಡಿಂಜೆ, ನಿಶಿತ್ ಶೆಟ್ಟಿ ಮುಂತಾದ ಕಲಾವಿದರು ನಟಿಸಿದ್ದಾರೆ.
ಬೋಧಿ ಪ್ರೊಡಕ್ಷನ್ ಪ್ರಸ್ತುತ ಪಡಿಸುವ, ಟಾಕೀಸ್ ಆಪ್ ನಿರ್ಮಿಸಿದ, ಗಣೇಶ್ ಎಂ ಉಜಿರೆ, ರಿತೇಶ್ ಗೌಡ ವೇಣೂರು,ನೆಲ್ವಿಸ್ಟರ್ ಗ್ಲಾನ್ ಪಿಂಟೋ ಸಹಕಾರದ ಚಿತ್ರಕ್ಕೆ ಮಾನಸ ಹೊಳ್ಳ ಅವರ ಸಂಗೀತ, ಸಂತೋಷ್ ಗುಂಪಾಲಜೆ ಅವರ ಛಾಯಾಗ್ರಾಹಣ, ಗಣೇಶ್ ನಿರ್ಚಲ್ ಅವರ ಸಂಕಲನ, ಸುಕೇಶ್ ಶೆಟ್ಟಿ ಅವರ ಸಾಹಿತ್ಯ, ಕಾಮಿಡಿ ಕಿಲಾಡಿ ಸೂರಜ್ ಕುಮಾರ್ ಅವರ ನೃತ್ಯ ನಿರ್ದೇಶನ, ಅವಿನಾಶ್ ನಾತು ಮತ್ತು ಪ್ರಣೀತ್ ಜೈನ್ ಅವರ ಕಲೆ ಈ ಚಿತ್ರಕ್ಕಿದೆ. ಸ್ಮಿತೇಶ್ ಎಸ್ ಬಾರ್ಯ ಮತ್ತು ಅನೀಶ್ ಅಮೀನ್ ವೇಣೂರು ತಾಂತ್ರಿಕ ಮೇಲ್ವಿಚಾರಣೆಯ ಚಿತ್ರಕ್ಕೆ ದೀಕ್ಷಿತ್ ಕೆ ಅಂಡಿಂಜೆ ನಿರ್ಮಾಣ ನಿರ್ವಹಣೆ ಇದೆ. ವಿನಯ್ ಕುಮಾರ್ ಉಜಿರೆ, ನಿರಾಜ್ ಕುಂಜಾರ್ಪ, ದೀಕ್ಷಿತ್ ಭಂಡಾರಿ, ನಿಶಿತ್ ಶೆಟ್ಟಿ ನಿರ್ದೇಶನ ತಂಡದಲ್ಲಿ ಸಹಕರಿಸಿದ್ದಾರೆ.
ಈ ಸೀರೀಸ್ ಆದಷ್ಟು ಶೀಘ್ರದಲ್ಲಿ ಟಾಕೀಸ್ ಆಪ್ ನಲ್ಲಿ ಬಿಡುಗಡೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು