2:30 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು

20/10/2023, 23:32

ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.


ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ತೆರಳಿದ್ದು ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ಯುವ ಮೋರ್ಚಾದ ಮುಖಂಡರಾದ ವಿಖ್ಯಾತ್, ಸುಹಾಸ್ ಮುಟ್ಟಪಾಡಿ, ರಾಕೇಶ್ ಕುಕ್ಕುಂದೂರು, ರಂಜಿತ್ ಕೌಡೂರು, ಮುಸ್ತಾ ಜಾರ್ಕಳ ಮೊದಲಾದವರು ಅಕ್ರಮ ಕೂಟ ಸೇರಿ ಅಲ್ಟಾಝ್ ಅವರನ್ನು ಎಳೆದುಕೊಂಡು ಹೋದರೆನ್ನಲಾಗಿದೆ.
ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಮೂರ್ತಿಯ ಬಳಿ ಕರೆದುಕೊಂಡು ಹೋಗಿ ಅದು ಕಂಚಿನ ಮೂರ್ತಿ ಎಂಬುದಾಗಿ ಸುತ್ತಿಗೆ ನೀಡಿ ಪರೀಕ್ಷಿಸು ಎಂದು ಹೇಳಿದ್ದಲ್ಲದೇ, ಅಲ್ಟಜ್ ಅವರಲ್ಲಿ ‘ಅದು ಕಂಚಿನ ಮೂರ್ತಿ’ ಎಂದು ಹೇಳಿಸಿ ವಿಡಿಯೋ ಮಾಡಿ ತೊಂದರೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಲ್ಟಾಝ್ ರವರ ಮೊಬೈಲನ್ನು ಎಳೆದುಕೊಂಡು ತೊಂದರೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು