3:00 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪರಶುರಾಮ ಥೀಮ್ ಪಾರ್ಕ್ ಫೋಟೋ ತೆಗೆಯಲು ಹೋದ ವ್ಯಕ್ತಿಗೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ಆರೋಪ: ದೂರು ದಾಖಲು

20/10/2023, 23:32

ಕಾರ್ಕಳ(reporterkarnataka.com): ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ಹೋದ ಯುವಕನಿಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ತೊಂದರೆ ನೀಡಿರುವುದಾಗಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.


ಕಾರ್ಕಳದ ಅಲ್ಟಾಝ್ (26) ಎಂಬವರು ಅ.19ರಂದು ಸಂಜೆ ಬೈಲೂರಿನ ಪರಶುರಾಮ ಥೀಮ್ ಪಾರ್ಕಿಗೆ ಫೋಟೋ ತೆಗೆಯಲು ತೆರಳಿದ್ದು ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ಯುವ ಮೋರ್ಚಾದ ಮುಖಂಡರಾದ ವಿಖ್ಯಾತ್, ಸುಹಾಸ್ ಮುಟ್ಟಪಾಡಿ, ರಾಕೇಶ್ ಕುಕ್ಕುಂದೂರು, ರಂಜಿತ್ ಕೌಡೂರು, ಮುಸ್ತಾ ಜಾರ್ಕಳ ಮೊದಲಾದವರು ಅಕ್ರಮ ಕೂಟ ಸೇರಿ ಅಲ್ಟಾಝ್ ಅವರನ್ನು ಎಳೆದುಕೊಂಡು ಹೋದರೆನ್ನಲಾಗಿದೆ.
ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಮೂರ್ತಿಯ ಬಳಿ ಕರೆದುಕೊಂಡು ಹೋಗಿ ಅದು ಕಂಚಿನ ಮೂರ್ತಿ ಎಂಬುದಾಗಿ ಸುತ್ತಿಗೆ ನೀಡಿ ಪರೀಕ್ಷಿಸು ಎಂದು ಹೇಳಿದ್ದಲ್ಲದೇ, ಅಲ್ಟಜ್ ಅವರಲ್ಲಿ ‘ಅದು ಕಂಚಿನ ಮೂರ್ತಿ’ ಎಂದು ಹೇಳಿಸಿ ವಿಡಿಯೋ ಮಾಡಿ ತೊಂದರೆ ಮಾಡಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಲ್ಟಾಝ್ ರವರ ಮೊಬೈಲನ್ನು ಎಳೆದುಕೊಂಡು ತೊಂದರೆ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು