11:08 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್: ದೆಹಲಿಗೆ ಬರುವಂತೆ ನಡ್ಡಾ ಸೂಚನೆ?

21/10/2023, 14:21

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಅಕ್ಟೋಬರ್ 25ರಂದು ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ, ಪ್ರತಿಪಕ್ಷದ ನಾಯಕನ ಹುದ್ದೆ ಹಾಗೂ ಜೆಡಿಎಸ್ ಜತೆ ಮೈತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಆಗಿರುವ ಸದಾನಂದ ಗೌಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಂತ ಸದಾನಂದ ಗೌಡ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡುವ ಸಾಧ್ಯತೆ ತೀರಾ ಕಡಿಮೆ. ಆದರೆ ಲೋಕಸಭೆ ಚುನಾವಣೆಯ ಸಮಯದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗಬಾರದು ಎನ್ನುವ ದೃಷ್ಟಿಯಿಂದ ಸದಾನಂದ ಗೌಡ ಅವರನ್ನು ದೆಹಲಿಗೆ ಕರೆಸಿರಬಹುದು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಾರೆ.
ಕೆಲ ದಿನಗಳ ಹಿಂದೆ ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಸದಾನಂದ ಗೌಡರು ಅಸಮಾಧಾನ ಹೊರ ಹಾಕಿದ್ದರು. ಹೈಕಮಾಂಡ್ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಬೇಸರ ಹೊರ ಹಾಕಿದ್ದರು. ಈ ನಡುವೆ ಡಿವಿಎಸ್ ಕಾಂಗ್ರೆಸ್ ಸೇರುತ್ತಾರೆ ಅನ್ನೋ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಶುರುವಾಗಿವೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾದಿಯನ್ನು ಸದಾನಂದ ಗೌಡರು ತುಳಿದರೆ ಪಕ್ಷದ ಇಮೇಜಿಗೆ ದಕ್ಕೆ ಬರಬಹುದು.
ಈ ಎಲ್ಲ ಬೆಳವಣಿಗೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೈಕಮಾಂಡ್ ಮಾತುಕತೆಗೆ ಕರೆದಿದೆ ಎನ್ನಲಾಗಿದೆ.
ಕರಾವಳಿ ಜಿಲ್ಲೆಯ ಸುಳ್ಯ ಸಮೀಪದ ದೇವರಗುಂಡದ ಸದಾನಂದ ಗೌಡ ಅವರು ಬಿಜೆಪಿ ಪಕ್ಷದ ದೊಡ್ಡ ಫಲಾನುಭವಿ ನಾಯಕ. ಶಾಸಕ, ಸಂಸದ, ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ ಸೇರಿದಂತೆ ಎಲ್ಲ ಸ್ಥಾನಮಾನಗಳನ್ನು ಪಕ್ಷ ಅವರಿಗೆ ನೀಡಿದೆ. ಇದನ್ನು ಸ್ವತಃ ಸದಾನಂದ ಗೌಡ ಅವರೇ ಒಪ್ಪಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು