11:21 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯಿಂದ ಸೌಹಾರ್ದ ಭೇಟಿ

21/10/2023, 20:37

ಮಂಗಳೂರು(reporterkarnataka.com):ಜಗತ್ಪ್ರಸಿದ್ಧ ಮಂಗಳೂರು ದಸರಾ ನಡೆಯುವ ಸೌಹಾರ್ದ ತಾಣ ಕುದ್ರೋಳಿ ಕ್ಷೇತ್ರಕ್ಕೆ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ವೇದಿಕೆಯ ಇತರ ಸದಸ್ಯರೊಂದಿಗೆ ಸೌಹಾರ್ದ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪೂಜೆ ಪುರಸ್ಕಾರ ಹಾಗೂ ಕಾರ್ಯಕ್ರಮಗಳನ್ನು ವೀಕ್ಷಿಸಿದರು.

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಮಾನವ ಸಂದೇಶ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಹಸ್ತದಿಂದ ಪ್ರತಿಷ್ಠಾಪನೆಗೊಂಡ ಶ್ರೀ ಗೋಕರ್ಣಾನಾಥ ಕ್ಷೇತ್ರವು ಸರ್ವ ಧರ್ಮದ ಜನತೆಯ ಪ್ರೀತಿ ವಿಶ್ವಾಸಗಳಿಸುವ ಮೂಲಕ ಸೌಹಾರ್ದತೆಯ ತಾಣವಾಗಿ ಜಗತ್ಪಸಿದ್ದಗೊಂಡಿದೆ. ಮಾತ್ರವಲ್ಲದೆ ನಾಡ ಹಬ್ಬವಾದ ದಸರಾದ ಇಲ್ಲಿನ ವೈಭವವು ಎಲ್ಲರ ಕಣ್ಮಣ ಸೆಳೆಯುತ್ತಿದೆ. ಮಂಗಳೂರು ದಸರಾ ಇಂದು ಜಾಗತಿಕ ಮನ್ನಣೆ ಪಡೆದಿದ್ದು, ಇಲ್ಲಿನ ದಸರಾ ಸಂಭ್ರಮದಲ್ಲಿ ದೇಶ ವಿದೇಶಗಳಿಂದ ಜನತೆ ಭಾಗವಹಿಸುವ ಮೂಲಕ ಕೂಡಿ ಬಾಳುವ ಸಂಸ್ಕ್ರತಿಯ ಪ್ರತೀಕವಾಗಿದೆ ಎಂದು ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋ ಅವರು ಈ ಸಂದರ್ಭದಲ್ಲಿ ನುಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಸದಸ್ಯರಾದ ರವಿಶಂಕರ್ ಮಿಜಾರ್,ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಪ್ರಮುಖರಾದ ಸುನಿಲ್ ಕುಮಾರ್ ಬಜಾಲ್, ಮಂಜುಳಾ ನಾಯಕ್,ಅಶ್ರಫ್ ಕೆ, ಡೋಲ್ಫಿ ಡಿಸೋಜ, ಮಹೇಶ್ ನಾಯಕ್, ಮರ್ಲಿನ್ ರೇಗೋ, ಫ್ಲೇವಿ ಕ್ರಾಸ್ತಾ,ಡಯಾನ ಡಿಸೋಜ,ಫ್ಲೋರಿನ್ ಡಿಸೋಜ, ಸಂಜನಾ ಛಲವಾದಿ,ಸಮರ್ಥ್ ಭಟ್,ಸಿಲ್ವಿಯಾ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು