12:04 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ

21/10/2023, 22:08

ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದುಗೂಡಿಸುವ ಒಂದು ಸಣ್ಣ ಪ್ರಯತ್ನದ ಭಾಗವಾಗಿ ಈ ಬಾರಿಯ ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ “ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು” ಎಂಬ ಕಣ್ಣೋಟದಿಂದ ಅಳವಡಿಸುವ ಟ್ಯಾಬ್ಲೋವನ್ನು ದಸರಾ ಮೆರವಣಿಗೆಯಲ್ಲಿ ಪ್ರದರ್ಶಿಸಿ ಮಂಗಳೂರಿನ ಅಭಿವೃದ್ಧಿಯಲ್ಲಿ ಸರ್ವ ಧರ್ಮದ ಜನರ ಕೊಡುಗೆಗಳನ್ನು ಸಮಾಜಕ್ಕೆ ನೆನಪಿಸುವ ಅಪೂರ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸ್ತಬ್ದಚಿತ್ರವನ್ನು ದ.ಕ‌.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ(ರಿ), ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಹಾಗೂ ಭಗತ್ ಸಿಂಗ್ ವಾರಿಯರ್ಸ್‌ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಅಯೋಜಿಸಲಾಗಿದ್ದು, ಇದರ ಯಶಸ್ವಿಗೆ ಸರ್ವ ಧರ್ಮದ ಜನತೆ ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು