9:39 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಯೋಗ ಪ್ರದರ್ಶಿಸಿ ನಾಡಿನ ಗಮನ ಸೆಳೆದ ಸ್ಪೀಕರ್ ಖಾದರ್!: 6ನೇ ತರಗತಿಯಲ್ಲೇ ಕರಗತ!!

22/10/2023, 22:47

ಪಲ್ಲವಿ ರಾಮಯ್ಯ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಗಣೇಶೋತ್ಸವ ವೇಳೆ ತಾಲೀಮು ಪ್ರದರ್ಶಿಸಿ ಸುದ್ದಿ ಮಾಡಿದ್ದ ಸ್ಪೀಕರ್ ಅವರು ಇದೀಗ ಯೋಗ ಪ್ರದರ್ಶನ ನೀಡುವ ಮೂಲಕ ನಾಡಿನ ಗಮನ ಸೆಳೆದಿದ್ದಾರೆ.
ಶಿವಮೊಗ್ಗದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಖಾದರ್ ಅವರು ಹೆಚ್ಚು ಕಡಿಮೆ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಶಿವಮೊಗ್ಗ ಮಾತ್ರವಲ್ಲ, ಇಡೀ ನಾಡಿನ ಗಮನ ಸೆಳೆದಿದ್ದಾರೆ.
ನನ್ನ ಬಾಲ್ಯಾವಸ್ಥೆಯಲ್ಲೇ 6ನೇ ತರಗತಿಯಿಂದ ನಾನು ಯೋಗಾಸನ ಮಾಡುತ್ತಿದ್ದೇನೆ.
ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು.ಯೋಗವನ್ನು ಎಲ್ಲರು ಮಾಡಬೇಕು ಎಂದು ಹೇಳಿದ್ದಾರೆ.
ನನ್ನ ಅಜ್ಜ (ತಾಯಿಯ ತಂದೆ) ಅವರು ಯೋಗ ಗುರುವಿಗೆ ಮನೆಗೆ ಬಂದು ಕಲಿಸಿಕೊಡುವಂತೆ ಕರೆಯುತ್ತಿದ್ದರು. ಇದರಿಂದ ಯೋಗ ನನಗೆ ಕಲಿಯಲು ಸಾಧ್ಯವಾಯಿತು ಎಂದು ಯು.ಟಿ. ಖಾದರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು