9:32 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಶೃಂಗೇರಿ ಸರಕಾರಿ ಆಸ್ಪತ್ರೆಯ ದುಷ್ಟ ಸಿಬ್ಬಂದಿಗಳು: ಬೆಂಚಿ ಮೇಲೆ ಮಲಗಿದ್ದರೂ ಬೆಳಗ್ಗೆಯಿಂದ ಸಂಜೆವರೆಗೂ ಮಹಿಳೆಗೆ ಚಿಕಿತ್ಸೆ ನೀಡದ ವೈದ್ಯರು!!

23/10/2023, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ತೀವ್ರ ಜ್ವರ ಹಾಗೂ ವಾಂತಿಯಿಂದ ಅಸ್ವಸ್ಥವಾಗಿದ್ದ ಮಹಿಳೆಯೊಬ್ಬರಿಗೆ ಬೆಳಗ್ಗಿನಿಂದ ಸಂಜೆ ವರೆಗೂ ಯಾವುದೇ ಚಿಕಿತ್ಸೆ ನೀಡದೆ ವೈದ್ಯ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದ ಘಟನೆ ಶೃಂಗೇರಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆ ಒಳಗಿನ ಬೆಂಚ್ ಮೇಲೆ ಮಲಗಿ ಕಮಲ ಎಂಬ ಮಹಿಳೆ ನರಳಾಡುತ್ತಿದ್ದರೂ ಆಸ್ಪತ್ರೆ ಸಿಬ್ಬಂದಿ ಕರುಣೆ ತೋರಿಸಿಲ್ಲ. ಮಹಿಳೆ ತೀವ್ರ ಅಸ್ವಸ್ಥ ರಾಗಿ ತೀವ್ರ ಜ್ವರ, ವಾಂತಿಯಿಂದ ನರಳುತ್ತಿದ್ರು ಆಸ್ಪತ್ರೆಗೆ ಸಿಬ್ಬಂದಿಗಳು ದಾಖಲಿಸಿಕೊಳ್ಳಲಿಲ್ಲ. ಬೆಳಗ್ಗೆಯಿಂದ ಆಸ್ಪತ್ರೆ ಆವರಣದ ಬೆಂಚ್ ಮೇಲೆ ರೋಗಿ ಮಲಗಿದ್ದರು. ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇದ್ರು ದಾಖಲು ಮಾಡಿಕೊಳ್ಳದ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ.
ತೀವ್ರ ಅನಾರೋಗ್ಯವಿದ್ರು ಚಿಕಿತ್ಸೆ ನೀಡದ ಶೃಂಗೇರಿ ತಾಲೂಕು ಆಸ್ಪತ್ರೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯಕ್ಕೊಳಗಾದ ಕಮಲ ಅವರು ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಮದಿಂದ ಆಸ್ಪತ್ರೆಗೆ ಬಂದಿದ್ದರು. ಪತಿಯ ಜತೆ ಆಸ್ಪತ್ರೆಗೆ ಆಗಮಿಸಿದ್ದರು.
ಮಹಿಳೆಯ ಪರದಾಟ ನೋಡಿ ಆಸ್ಪತ್ರೆ ಸಿಬ್ಬಂದಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರು ಕ್ಲಾಸ್ ತೆಗದು ಕೊಳ್ಳುತ್ತಿದ್ದಂತೆ ಆಸ್ಪತ್ರೆಗೆ ಸಿಬ್ಬಂದಿಗಳು ದಾಖಲಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು