10:52 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸುಮಾರು 204 ಪ್ರಕರಣಗಳ ತನಿಖೆಗೆ ಸಹಕರಿಸಿದ ಪೊಲೀಸ್ ಡಾಗ್ ಗೆ ಬೀಳ್ಕೊಡುಗೆ: 10 ವರ್ಷಗಳ ಸುದೀರ್ಘ ಸೇವೆ ನೀಡಿದ ಶ್ವಾನ

25/10/2023, 10:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳ ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್‍ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಶ್ರಮಿಸಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು.‌ ಪೊಲೀಸ್ ಶ್ವಾನಕ್ಕೆ ನಗರದ ಡಿ.ಎ.ಆರ್. ಆವರಣದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆದಿದೆ. ಶ್ವಾನದ ಹ್ಯಾಂಡ್ಲಾರ್ ಗಳಾಗಿ ಮಂಜುನಾಥ ಹಾಗೂ ಸಹಾಯಕ ನಿರ್ವಾಹಕರಾದ ಕುಮಾರ್ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ. ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ 204 ಪ್ರಕರಣಗಳಲ್ಲಿ 35 ಪ್ರಕರಣದಲ್ಲಿ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ. ಈ ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿಯೂ ಹಲವು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿತ್ತು. ಶ್ವಾನದ ಹ್ಯಾಂಡ್ಲರ್ ಗಳಾದ ಮಂಜುನಾಥ್ ಹಾಗೂ ಕುಮಾರ್‍ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸಂಶನ ಪತ್ರ ನೀಡಿ ಗೌರವಿಸಿರುತ್ತಾರೆ. ಈ ಶ್ವಾನ 2013ರಲ್ಲಿ ಪೊಲೀಸ್ ಇಲಾಖೆ ಸೇರಿತ್ತು. ಅಲ್ಲಿಂದ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕರಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು