9:37 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಟ್ರಾಫಿಕ್ ಜಾಮ್ ತಡೆಗೆ ಬಸ್ ಚಲಿಸಲು ರಸ್ತೆಯಲ್ಲಿ ಯಲ್ಲೋ ಲೈನ್ ಅಳವಡಿಕೆ: ಡಿಸಿಪಿ ಸಲಹೆಗೆ ಮಂಗಳೂರು ಮೇಯರ್ ಅಸ್ತು

25/10/2023, 13:22

ಮಂಗಳೂರು(reporterkarnataka.com): ನಗರದಲ್ಲಿ ವಿಶೇಷವಾಗಿ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಟ್ರಾಫಿಕ್ ಜಾಮ್ ಆಗುವುದನ್ನು ತಡೆಯಲು ರಸ್ತೆಯಲ್ಲಿ ಬಸ್ ಚಲಿಸಲು ಯಲ್ಲೋ(ಹಳದಿ)ಲೈನ್ ಹಾಕಲು ಡಿಸಿಪಿ ದಿನೇಶ್ ಕುಮಾರ್ ಸಲಹೆ ಮಾಡಿದ್ದು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಒಪ್ಪಿಗೆ ಸೂಚಿಸಿದ್ದಾರೆ.


ಚತುಷ್ಪಥದಲ್ಲಿ ಬಸ್ ಗಳು ರಸ್ತೆಯಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ಗಳ
ಎಂಟ್ರಿ ಮತ್ತು ಎಕ್ಸಿಟ್ ನಲ್ಲಿ ಹಂಪ್ಸ್ ಆಳವಡಿಸಬೇಕು. ಬಸ್ ಗಳು ಅತೀ ವೇಗವಾಗಿ ಬಸ್ ಸ್ಟಾಂಡಿನೊಳಗೆ ಚಲಿಸುವುದನ್ನು ಇದರಿಂದ ತಡೆಯಲು ಸಾಧ್ಯ ಎಂದು ಡಿಸಿಪಿ ಅಭಿಪ್ರಾಯಪಟ್ಟರು.
ಸರ್ವಿಸ್ ಬಸ್ ನಿಲ್ದಾಣ ಬಳಿಯ ಅನಧಿಕೃತ ಆಟೋರಿಕ್ಷಾ ಪಾರ್ಕಿಂಗ್ ಅನ್ನು ಡಿಸಿಪಿ ಪರಿಶೀಲನೆಗೆ ಸೂಚಿಸಿದರು.

ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್ ಗಳಾದ ದಿವಾಕರ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ ಜತೆ ಸ್ಟೇಟ್ ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಕ್ಕೆ ಡಿಸಿಪಿ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು